ಬ್ಲಾಕ್ ಲೇಬೆಲ್, ರೇಣುಕಾಚಾರ್ಯ ಇನ್ ಟ್ರಬಲ್

ಇದರೊಂದಿಗೆ, ಯಡಿಯೂರಪ್ಪನವರನ್ನು ಬೆಂಬಲಿಸಿ ಬಿಜೆಪಿ ಶಾಸಕರು ನಡೆಸಿದ ಗೋಲ್ಡನ್ ಪಾಮ್ಸ್ ರೆಸಾರ್ಟ್ ರಾಜಕೀಯ ಹೊಸ ರಂಗು, ನಶೆಯನ್ನು ಪಡೆದಿದೆ. ಅಬಕಾರಿ ಎಸಿಯ ಕಚೇರಿಯಿಂದ ವಶಪಡಿಸಿಕೊಳ್ಳಲಾಗಿದ್ದ ಮೂರು ಬಾಟಲುಗಳನ್ನು ರೆಸಾರ್ಟಿಗೆ ಕಳಿಸಲು ಸ್ವತಃ ರೇಣುಕಾಚಾರ್ಯ ಅವರೇ ಆದೇಶಿಸಿದ್ದರು ಎಂದು ನೀಡಿರುವ ಹೇಳಿಕೆ ಅಬಕಾರಿ ಸಚಿವರನ್ನು ತೊಂದರೆಗೆ ಸಿಲುಕಿಸಿದೆ.
ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆಯುತ್ತಿದೆ ಎಂಬ ದೂರು ಬಂದಿದ್ದ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ಅಬಕಾರಿ ಅಧಿಕಾರಿ ಮೋಹನ್ ಕುಮಾರ್ ಅವರ ಕಚೇರಿ ಮೇಲೆ ದಾಳಿ ನಡೆಸಲಾಗಿತ್ತು. ಆಗ ಅವರಿಂದ 25,200 ರು. ನಗದು ಮತ್ತು ಬ್ಲಾಕ್ ಲೇಬೆಲ್, ಜಾನಿ ವಾಕರ್ ಮುಂತಾದ ವಿದೇಶಿ ಬ್ರಾಂಡುಗಳ 24 ಬಾಟಲುಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಮೋಹನ್ ಕುಮಾರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅವರು, ಸೀಜ್ ಮಾಡಿದ್ದ ವಿದೇಶಿ ಬ್ರಾಂಡಿನ ಬಾಟಲುಗಳಲ್ಲಿ ಮೂರನ್ನು ರೆಸಾರ್ಟಿಗೆ ಕಳಿಸಲು ತಾಕೀತು ಮಾಡಿದ್ದರು ಎಂದು ಬಾಯಿಬಿಟ್ಟಿದ್ದಾರೆ. ಇದೇ ಹೇಳಿಕೆಯನ್ನು ಕಣ್ಣೀರುಗರೆಯುತ್ತಲೇ ಲೋಕಾಯುಕ್ತ ವಿಶೇಷ ನ್ಯಾಯಾಧೀಶರ ಮುಂದೆಯೂ ಶನಿವಾರ ಮೋಹನ್ ಕುಮಾರ್ ಬಾಯಿಬಿಟ್ಟಿದ್ದಾರೆ.
ಆ ವಿದೇಶಿ ಬ್ರಾಂಡಿನ ದುಬಾರಿ ಬಾಟಲಿಗಳನ್ನು ರೇಣುಕಾಚಾರ್ಯರಿಗಾಗಿ ಇಂದಿರಾನಗರದ ಮದ್ಯದಂಗಡಿಯಿಂದ ತರಿಸಲಾಗಿತ್ತು ಎಂದು ಕುಮಾರ್ ತಿಳಿಸಿದ್ದಾರೆ. ಈ ಹೇಳಿಕೆಯ ಆಧಾರದ ಮೇಲೆ, ರೇಣುಕಾಚಾರ್ಯ ಅವರ ಮೇಲೆ ದೂರು ದಾಖಲಿಸಲು ನ್ಯಾಯಾಧೀಶರು ಸೂಚಿಸಿದ್ದು, ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ. ಹಿಂದೊಮ್ಮೆ ಐದು ವರ್ಷದ ಬಾಲಕನಿಗೇ ಬ್ರಾಂಡಿ ನೀಡಿ ರೇಣುಕಾಚಾರ್ಯ ವಿವಾದಕ್ಕೆ ಗುರಿಯಾಗಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications