ಯಡಿಯೂರಪ್ಪ ನಿಷ್ಠ ಅರವಿಂದ ಲಿಂಬಾವಳಿಗೆ ಏನಾಗಿದೆ?

ಈಗಲೂ ಅಷ್ಟೇ ಮೊನ್ನೆ ಇದ್ದಕ್ಕಿದ್ದಂತೆ ಯಡಿಯೂರಪ್ಪ ಪರ ಬ್ಯಾಟಿಂಗ್ ಆಡುತ್ತಿದ್ದ ಲಿಂಬಾವಳಿ ಇದೀಗ ತಮ್ಮ ನಿಷ್ಠೆ ಬದಲಾಯಿಸಿದ್ದಾರೆ. ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಸಹ ಇದೇ ಹಾದಿ ತುಳಿದಿದ್ದಾರೆ. ಹೈಕಮಾಂಡ್ ಕರೆಯದಿದ್ದರೂ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಪರವಾಗಿ ಲಾಬಿ ಮಾಡಲು ಇಬ್ಬರೂ ದೆಹಲಿಗೆ ದೌಡಾಯಿಸಿದ್ದಾರೆ.
ಶನಿವಾರವೇ ಇಬ್ಬರೂ ತಮ್ಮ ಸಮಾನಮನಸ್ಕರೊಂದಿಗೆ ದೆಹಲಿಗೆ ತೆರಳಿದ್ದು, ಇಂದು ಪಕ್ಷದ ವರಿಷ್ಠ ನಾಯಕರನ್ನು ಭೇಟಿ ಮಾಡಿ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ದಾಖಲಿಸಲಿದ್ದಾರೆ ಎನ್ನಲಾಗಿದೆ.
ಲಿಂಬಾವಳಿ ಯಾವ ಬಣದಲ್ಲಿದ್ದಾರೆ ಎಂಬುದರ ಬಗ್ಗೆ ಹಲವು ಗೊಂದಲಗಳಿವೆ. ಯಡಿಯೂರಪ್ಪ ಬೆಂಬಲಿಸಿ ರೆಸಾರ್ಟ್ಗೆ ತೆರಳಿದ್ದ ಲಿಂಬಾವಳಿ ರಾಜ್ಯಸಭೆಗೆ ಬಿ.ಜೆ. ಪುಟ್ಟಸ್ವಾಮಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ್ದರು. ಮರುದಿನ ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ಅವರ ನಿರ್ದೇಶನದ ಮೇರೆಗೆ ಸಹಿ ವಾಪಸ್ ಪಡೆದಿದ್ದೂ ಅಲ್ಲದೆ, ಯಡಿಯೂರಪ್ಪ ಪಾಳೆಯ ಬಿಟ್ಟು ಹೊರಬಂದರು. ರೆಸಾರ್ಟ್ ರಾಜಕಾರಣ ಸರಿಯಲ್ಲ ಎಂಬ ಹೇಳಿಕೆಯನ್ನೂ ನೀಡಿದ್ದರು.
ದೆಹಲಿಯಲ್ಲಿ ಸರಣಿ ಭೇಟಿ: ತಾಜಾ ವರದಿಗಳ ಪ್ರಕಾರ ಲಿಂಬಾವಳಿ ನೇತೃತ್ವದ ನಿಯೋಗವು ಮೊದಲು ಪಕ್ಷದ ಹಿರಿಯ ನಾಯಕ ರಾಜನಾಥ್ ಸಿಂಗ್, ನಂತರ ಮತ್ತೊಬ್ಬ ನಾಯಕ ಅಡ್ವಾಣಿ ಹಾಗೂ ಕೊನೆಯದಾಗಿ ಸುಷ್ಮಾ ಸ್ವರಾಜ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಈಶ್ವರಪ್ಪನವರನ್ನು, ಅರ್ಥಾತ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೆ ಯಾವುದೇ ಪ್ರಮುಖ ಸ್ಥಾನಮಾನ ನೀಡಬಾರದು ಎಂದು ವರಿಷ್ಠರಲ್ಲಿ ಮನವಿ ಮಾಡಿಕೊಂಡಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications