ಯಡಿಯೂರಪ್ಪ ನಿಷ್ಠ ಅರವಿಂದ ಲಿಂಬಾವಳಿಗೆ ಏನಾಗಿದೆ?

ಈಗಲೂ ಅಷ್ಟೇ ಮೊನ್ನೆ ಇದ್ದಕ್ಕಿದ್ದಂತೆ ಯಡಿಯೂರಪ್ಪ ಪರ ಬ್ಯಾಟಿಂಗ್ ಆಡುತ್ತಿದ್ದ ಲಿಂಬಾವಳಿ ಇದೀಗ ತಮ್ಮ ನಿಷ್ಠೆ ಬದಲಾಯಿಸಿದ್ದಾರೆ. ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಸಹ ಇದೇ ಹಾದಿ ತುಳಿದಿದ್ದಾರೆ. ಹೈಕಮಾಂಡ್ ಕರೆಯದಿದ್ದರೂ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಪರವಾಗಿ ಲಾಬಿ ಮಾಡಲು ಇಬ್ಬರೂ ದೆಹಲಿಗೆ ದೌಡಾಯಿಸಿದ್ದಾರೆ.
ಶನಿವಾರವೇ ಇಬ್ಬರೂ ತಮ್ಮ ಸಮಾನಮನಸ್ಕರೊಂದಿಗೆ ದೆಹಲಿಗೆ ತೆರಳಿದ್ದು, ಇಂದು ಪಕ್ಷದ ವರಿಷ್ಠ ನಾಯಕರನ್ನು ಭೇಟಿ ಮಾಡಿ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ದಾಖಲಿಸಲಿದ್ದಾರೆ ಎನ್ನಲಾಗಿದೆ.
ಲಿಂಬಾವಳಿ ಯಾವ ಬಣದಲ್ಲಿದ್ದಾರೆ ಎಂಬುದರ ಬಗ್ಗೆ ಹಲವು ಗೊಂದಲಗಳಿವೆ. ಯಡಿಯೂರಪ್ಪ ಬೆಂಬಲಿಸಿ ರೆಸಾರ್ಟ್ಗೆ ತೆರಳಿದ್ದ ಲಿಂಬಾವಳಿ ರಾಜ್ಯಸಭೆಗೆ ಬಿ.ಜೆ. ಪುಟ್ಟಸ್ವಾಮಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ್ದರು. ಮರುದಿನ ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ಅವರ ನಿರ್ದೇಶನದ ಮೇರೆಗೆ ಸಹಿ ವಾಪಸ್ ಪಡೆದಿದ್ದೂ ಅಲ್ಲದೆ, ಯಡಿಯೂರಪ್ಪ ಪಾಳೆಯ ಬಿಟ್ಟು ಹೊರಬಂದರು. ರೆಸಾರ್ಟ್ ರಾಜಕಾರಣ ಸರಿಯಲ್ಲ ಎಂಬ ಹೇಳಿಕೆಯನ್ನೂ ನೀಡಿದ್ದರು.
ದೆಹಲಿಯಲ್ಲಿ ಸರಣಿ ಭೇಟಿ: ತಾಜಾ ವರದಿಗಳ ಪ್ರಕಾರ ಲಿಂಬಾವಳಿ ನೇತೃತ್ವದ ನಿಯೋಗವು ಮೊದಲು ಪಕ್ಷದ ಹಿರಿಯ ನಾಯಕ ರಾಜನಾಥ್ ಸಿಂಗ್, ನಂತರ ಮತ್ತೊಬ್ಬ ನಾಯಕ ಅಡ್ವಾಣಿ ಹಾಗೂ ಕೊನೆಯದಾಗಿ ಸುಷ್ಮಾ ಸ್ವರಾಜ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಈಶ್ವರಪ್ಪನವರನ್ನು, ಅರ್ಥಾತ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೆ ಯಾವುದೇ ಪ್ರಮುಖ ಸ್ಥಾನಮಾನ ನೀಡಬಾರದು ಎಂದು ವರಿಷ್ಠರಲ್ಲಿ ಮನವಿ ಮಾಡಿಕೊಂಡಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications