ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಚುನಾವಣೆಗೆ ಸನ್ನದ್ಧರಾಗಲು ಸೋನಿಯಾ ಸೂಚನೆ
ಉಪ ಚುನಾವಣೆಯಲ್ಲಿ ಜಯ ಸಾಧಿಸಿದ ಜಯಪ್ರಕಾಶ್ ಹೆಗಡೆ ಅವರನ್ನು ಅಭಿನಂದಿಸಿದ ಸೋನಿಯಾ, ರಾಜ್ಯ ಬಿಜೆಪಿಯಲ್ಲಿ ಅರಾಜಕತೆ ಎದ್ದಿರುವುದರಿಂದ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಬಹುದು, ನೀವು ಯಾವುದಕ್ಕೂ ಸಿದ್ಧರಾಗಿರಿ ಎಂದು ಕಿವಿಮಾತು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ, ಕೇಂದ್ರ ಸಚಿವರಾದ ಕೆಎಚ್ ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫರ್ನಾಂಡಿಸ್ ಮುಂತಾದವರು ಸೋನಿಯಾ ಗಾಂಧಿಯವರನ್ನು 10 ಜನಪಥ್ ನಿವಾಸದಲ್ಲಿ ಭೇಟಿ ಮಾಡಿ ರಾಜ್ಯದ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು.
ಭೇಟಿಯ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಪರಮೇಶ್ವರ್ ಅವರು, ದುರಾಡಳಿತದಲ್ಲಿ ಮುಳುಗಿರುವ ಬಿಜೆಪಿ ಸರಕಾರವನ್ನು ಸಂಘಟಿತ ಹೋರಾಟದ ಮುಖಾಂತರ ಕಿತ್ತೊಗೆಯುವುದು ಕಾಂಗ್ರೆಸ್ನ ಮುಂದಿರುವ ಗುರಿ ಎಂದರು. ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ದರಾಗಿರಿ ಎಂದು ಸೋನಿಯಾ ತಿಳಿಸಿರುವುದಾಗಿ ತಿಳಿಸಿದರು.
Comments
English summary
AICC president Sonia Gandhi has asked Karnataka Congress leaders to get ready for Assembly elections. Congress leaders Mallikarjun Kharge, KH Muniyappa along with Udupi-Chikmagalur MP Jayaprakash Hegde met Sonia in New Delhi.
Story first published: Monday, March 26, 2012, 19:54 [IST]