ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲ್ವೆ ಇಲಾಖೆಗೆ ಒಂದು ಲಕ್ಷ ಸಿಬ್ಬಂದಿ ನೇಮಕ

By Srinath
|
Google Oneindia Kannada News

one-lakh-employment-in-railway-kh-muniyappa
ಬೆಂಗಳೂರು,ಮಾ, 26: ರೈಲ್ವೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ತೀವ್ರವಾಗಿದೆ. ಅದನ್ನು ನೀಗಿಸಲು ಒಂದು ಲಕ್ಷ ಮಂದಿಯನ್ನು ನೇಮಕ ಮಾಡಿಕೊಳ್ಳಬೇಕಿದ್ದು, ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ರೈಲ್ವೆ ಖಾತೆ ಸಹಾಯಕ ಸಚಿವ ಕೆ.ಎಚ್. ಮುನಿಯಪ್ಪ ಪ್ರಕಟಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಡೆದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.

ಮೈಸೂರು-ಬೆಂಗಳೂರು ನಗರಗಳನ್ನು ಹೈದರಾಬಾದ್-ಸಿಕಂದರಾಬಾದ್ ಅವಳಿ ನಗರಗಳ ಮಾದರಿಯಲ್ಲಿ ಅಭಿವದ್ಧಿಪಡಿಸಲಾಗುವುದು. ಮೈಸೂರು-ಬೆಂಗಳೂರು ನಡುವಿನ ರೈಲು ಸೇವೆ ಮತ್ತಷ್ಟು ವಿಸ್ತಾರಗೊಳ್ಳಬೇಕಿದೆ. ಪ್ರಯಾಣ ಇನ್ನಷ್ಟು ತ್ವರಿತವಾಗಬೇಕಿದ್ದು, ಇದು ಸಾಧ್ಯವಾದರೆ ಉಭಯ ನಗರಗಳ ನಡುವೆ ಸಂಚಾರಕ್ಕೆ ಹಾದಿ ಸುಗಮವಾಗಲಿದೆ ಎಂದೂ ಅವರು ಅಭಿಪ್ರಾಯಪಟ್ಟರು.

ಬೆಂಗಳೂರು-ಶಿವಮೊಗ್ಗ-ತಾಳಗುಪ್ಪ ರೈಲ್ವೆ ಮಾರ್ಗ ಸಿದ್ಧವಾಗಿದ್ದು ಆದಷ್ಟು ಬೇಗ ರೈಲು ಸಂಚಾರವನ್ನು ಆರಂಭಿಸಲಾಗುವುದು. ಈಗಾಗಲೇ ತಾಳಗುಪ್ಪದಿಂದ ಮೈಸೂರು, ಹಾಸನಕ್ಕೆ ರೈಲು ಸಂಚಾರ ಆರಂಭವಾಗಿದ್ದು, ಸದ್ಯದಲ್ಲೇ ಬೆಂಗಳೂರು-ತಾಳಗುಪ್ಪ ರೈಲು ಮಾರ್ಗ ಕಾರ್ಯಾರಂಭ ಮಾಡಲಿದೆ ಎಂದರು.

English summary
Railway State Minister KH Muniyappa has said in Bangalore last week that Indian Railway is facing severe shortage of staff. To over come it one lakh persons will be recruited shortly. And the process has begun he declared.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X