ಬೆಂಗಳೂರು ವಕ್ಫ್ ಬೋರ್ಡ್ ಭೂಕಬಳಿಕೆಗೆ sample

ಲಾಲ್ ಬಾಗ್ ಪ್ರಕರಣ ಹೀಗಿದೆ: ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಕಚೇರಿ ಹೊಂದಿರುವ ವಕ್ಫ್ ಮಂಡಳಿಯ ಅಧ್ಯಕ್ಷ ಆರ್. ಅಬ್ದುಲ್ ರಿಯಾಜ್ ಖಾನ್ ಮತ್ತು ಇತರೆ ಸದಸ್ಯರು ಇದರಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಹಗರಣದ ಬೆನ್ನುಹತ್ತಿದ್ದ ಸಿಐಡಿ ಪೊಲೀಸರು ಮಂಡಳಿ ಅಧ್ಯಕ್ಷ ರಿಯಾಜ್ ಖಾನ್ ಗಾಗಿ ಒಂದು ತಿಂಗಳಿನಿಂದ ಬೇಟೆಯಾಡುತ್ತಿದ್ದಾರೆ.
ಲಾಲ್ ಬಾಗ್ ಸಸ್ಯಕಾಶಿಯ ಪಕ್ಕದಲ್ಲೇ ಇರುವ 2.3 ಎಕರೆ ಪ್ರದೇಶವೇ ಈ ವಿವಾದಿತ ಭೂಮಿಯಾಗಿದೆ. ಎಚ್. ಭವಾರಿಲಾಲ್ ಎಂಬುವವರಿಗೆ ಅಧ್ಯಕ್ಷ ರಿಯಾಜ್ ಖಾನ್ 2008ರಲ್ಲೇ ಈ ಭೂಮಿಯನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ವಾಸ್ತವವಾಗಿ 2000ರಲ್ಲೇ ಹಾಪ್ ಕಾಮ್ಸ್ ಈ ಭೂಮಿ ತನ್ನದೆಂದು ಹೈಕೋರ್ಟ್ ಮೊರೆಹೋಗಿತ್ತು. ಆದರೆ ಕೋರ್ಟ್ ವಕ್ಫ್ ಮಂಡಳಿ ಪರ ತೀರ್ಪು ನೀಡಿತು.
ಈ ಮಧ್ಯೆ 2007ರಲ್ಲಿ ಭವಾರಿಲಾಲ್ ನಿಧನರಾದರು. ಆ ಸಂದರ್ಭದಲ್ಲಿ ವಕ್ಫ್ ಮಂಡಳಿ ಕೋರ್ಟಿಗೆ ಮತ್ತೊಂದು ಅರ್ಜಿ ಗುಜರಾಯಿಸಿ, ಆ ವಿವಾದಿತ ಭೂಮಿಗೂ ತನಗೂ ಈಗ ಯಾವುದೇ ಸಂಬಂಧವಿಲ್ಲ ಎಂದು ಘೋಷಿಸಿತು.
ಆಗ ಮಧ್ಯ ಪ್ರವೇಶಿಸಿದ ರಾಜ್ಯ ಸರಕಾರ ಹಿರಿಯ ಐಎಎಸ್ ಅಧಿಕಾರಿ ಸಯ್ಯದ್ ಜಮೀರ್ ಪಾಷಾ ಅವರಿಗೆ ಪ್ರಕರಣವನ್ನು ಪರಾಮರ್ಷಿಸುವಂತೆ ಸೂಚಿಸಿತು. ಜಮೀರ್ ಪಾಷಾ ಅವರ ಶಿಫಾರಸಿನಂತೆ ಸರಕಾರ 2009ರಲ್ಲಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತು. ತನಿಖೆ ನಡೆಸಿದ ಸಿಐಡಿ ವಕ್ಫ್ ಮಂಡಳಿ ಅಧ್ಯಕ್ಷ ಆರ್. ಅಬ್ದುಲ್ ರಿಯಾಜ್ ಖಾನ್ ಮತ್ತು ಇತರೆ ಸದಸ್ಯರು ಹಗರಣದಲ್ಲಿ ಶಾಮೀಲಾಗಿರುವುದು ದೃಢಪಟ್ಟಿದೆ ಎಂದು ವರದಿ ಸಲ್ಲಿಸಿತು.
ತದನಂತರ ನ್ಯಾಯಾಂಗ ತನಿಖೆ, ಮತ್ತೆ ಪೊಲೀಸ್ ತನಿಖೆ ಮತ್ತು ಕೋರ್ಟ್ ತೀರ್ಪುಗಳ ಹೊಯ್ದಾಟದಲ್ಲಿ ಪ್ರಕರಣದ ಆಮೂಲಾಗ್ರ ತನಿಖೆ ಕೈಗೆತ್ತಿಕೊಳ್ಳುವಂತೆ ಮತ್ತೆ ಸಿಐಡಿಗೆ ನೀಡಲಾಗಿದೆ. ಅಧ್ಯಕ್ಷ ರಿಯಾಜ್ ಖಾನ್ ಮತ್ತೊಂದು ವಂಚನೆಗೆ ರಿಯಾಜು ಮಾಡಿಕೊಳ್ಳುತ್ತಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications