ಏ.1ರಂದು ರಂಗಶಂಕರದಲ್ಲಿ ಮತ್ತೆ ಜುಗಾರಿ ಕ್ರಾಸ್

ನಟರಾಜ ಹೊನ್ನವಳ್ಳಿಯವರ ನಿರ್ದೇಶನದ ಈ ನಾಟಕ ಈಗಾಗಲೇ 55ಕ್ಕೂ ಹೆಚ್ಚು ಪ್ರ್ರದರ್ಶನಗಳನ್ನು ಕಂಡು ನೂರನೇ ಪ್ರದರ್ಶನದ ಕಡೆಗೆ ದಾಪುಗಾಲಿಡುತ್ತಿದೆ.
ವಾರಾಂತ್ಯದಲ್ಲಿ ಮಕ್ಕಳಿಂದ ಮುದುಕವರೆಗೆ ಮನರಂಜನೆ ನೀಡಬಲ್ಲ ಈ ನಾಟಕ ನೋಡಲು ಮರೆಯದಿರಿ ಎಂದು ಸಮುದಾಯ ತಂಡದ ಕಾರ್ಯದರ್ಶಿ ವೆಂಕಟೇಶ್ ಪ್ರಸಾದ್ ಅವರು ಒನ್ ಇಂಡಿಯಾ ಕನ್ನಡಕ್ಕೆ ಹೇಳಿದ್ದಾರೆ.
ಕಾಡು ಮೇಡುಗಳಲ್ಲಿ ಅಲೆಯುತ್ತ ಪಕ್ಷಿ ಪರಿಸರಗಳ ಕುರಿತು ವಿಶೇಷ ಅಧ್ಯಯನ ಮಾಡಿದ ತೇಜಸ್ವಿ ಕಟ್ಟಿಕೊಟ್ಟ ಕಥೆಯನ್ನು ನಾಟಕ ರೂಪಕ್ಕೆ ತಂದವರು ಕನ್ನಡ ರಂಗಭೂಮಿಯ ಮತ್ತೊಬ್ಬ ವಿಶೇಷ ಪ್ರತಿಭೆಯಾದ ನಟರಾಜ ಹೊನ್ನವಳ್ಳಿಯವರು.
ಕಥೆ ವಿವರ: ಲೇಖಕ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರೇ ಹೇಳಿಕೊಂಡಿರುವಂತೆ ಒಂದು ಕ್ಷಣಕ್ಕೆ ರೊಮ್ಯಾಂಟಿಕ್ ಥ್ರಿಲ್ಲರ್ ಎಂದೆನಿಸಬಹುದಾದ ಈ ಕೃತಿ ಬದಲಾಗುತ್ತಿರುವ ಸನ್ನಿವೇಶಗಳು ಉಂಟುಮಾಡುತ್ತಿರುವ ಅವಾಂತರ ಅಪಾಯಗಳನ್ನೂ, ಅಭಿವೃದ್ಧಿಶೀಲ ರಾಷ್ಟ್ರಗಳ ಪ್ರದೇಶಗಳಲ್ಲಿ ಜಾಗತಿಕ ಪರಿಣಾಮಗಳು ಸೃಷ್ಟಿಸಬಹುದಾದ ತಲ್ಲಣಗಳನ್ನು ಎಳೆಎಳೆಯಾಗಿ ಪ್ರೇಕ್ಷಕರ ಮುಂದಿಡುತ್ತಾ ಹೋಗುತ್ತದೆ.
ಕೇವಲ 24 ಘಂಟೆಗಳಲ್ಲಿ ನಡೆಯುವ ಈ ನಾಟಕದ ಕಥೆ ನಿಜವಾಗಿಯೂ ಸಹ್ಯಾದ್ರಿಯ ಕಾಡುಗಳ ತಪ್ಪಲಿನಲ್ಲಿ ನಡೆಯಬಹುದಾದ ವಾಸ್ತವದ ಸಾಮಾಜಿಕ ಕಾದಂಬರಿ. ಮಲೇನಾಡಿನ ದಟ್ಟ ಕಾಡೇ ಕಾಳ ಧಂಧೆಗಳ ತವರೂರಾಗುವುದು, ಈ ಕಾಳ ವ್ಯವಹಾರಗಳ ಜೊತೆಜೊತೆಗೇ ಡ್ರಗ್ಸ್ ಮಾಫಿಯಾ ಜೂಜು ಸೇರಿ, ಏಲಕ್ಕಿ ಮಾರಲೆಂದು ಹೊರಟ ವಿದ್ಯಾವಂತ ರೈತ ದಂಪತಿಗಳಾದ ಸುರೇಶ ಮತ್ತು ಗೌರಿ ಆ ವ್ಯೂಹದಲ್ಲಿ ಸಿಕ್ಕಿಹಾಕಿಕೊಳ್ಳುವುದೇ ಈ ಕಥೆಯ ಹಿನ್ನೆಲೆ.
ಹುಸಿ ಕ್ರಾಂತಿಕಾರಿ ಗಂಗೂಲಿ, ಅರವತ್ತು ಸಾವಿರ ಲಂಚ ಕೊಟ್ಟು ಅದನ್ನು ಗಿಟ್ಟಿಸಲು ಪೇಚಾಡುವ ಇಕ್ಬಾಲ್, ಇಪ್ಪತ್ತು ರೂಪಾಯಿಗೂ ಖೂನಿಮಾಡಬಲ್ಲ ಜಾನಿ ಹೆನ್ರಿ, ಅನಧಿಕೃತವಾಗಿ ಚೆಕ್ಗಳನ್ನು ಕ್ಯಾಷ್ ಮಾಡುವ ಶೇಷಪ್ಪ ಪಾತ್ರಗಳಂತೆ ಕಾಣದೆ ಪ್ರೇಕ್ಷಕರ ನಡುವೆ ಇರುವ ಸಹಜ ವ್ಯಕಿಗಳಂತೆ ಗೋಚರಿಸುತ್ತಾರೆ.
ತೇಜಸ್ವಿಯವರ ಈ ಕಾದಂಬರಿಯನ್ನು ಸೂಕ್ಷ್ಮವಾಗಿ ರಂಜನೀಯವಾಗಿ ವಿನ್ಯಾಸಗೊಳಿಸಿ ನಿರ್ದೇಶಿಸಿರುವ ನಟರಾಜ ಹೊನ್ನವಳ್ಳಿಯವರ ಸೃಜನಶೀಲತೆ ನಾಟಕದಲ್ಲೆಡೆ ಅನುಭವಕ್ಕೆ ಬರುತ್ತದೆ. ಥ್ರಿಲ್ ನೀಡುವ ಸಂಗೀತ, ಅದ್ಭುತ ಬೆಳಕಿನಾಟ, ಹೊಸಲೋಕ ಸೃಷ್ಟಿಸುವ ರಂಗಸಜ್ಜಿಕೆ ಈ ನಾಟಕದ ವೈಶಿಷ್ಟ್ಯ. ಸಾಹಿತ್ಯ ಪ್ರಿಯರು ಮತ್ತು ರಂಗಾಸಕ್ತರಲ್ಲದೇ ಎಲ್ಲರೂ ಕೂಡ ನೋಡಿ ಅನುಭವಿಸಬಹುದಾದ ನಾಟಕ ಜುಗಾರಿ ಕ್ರಾಸ್ !
ನಾಟಕ : ಜುಗಾರಿ ಕ್ರಾಸ್
ರಚನೆ : ಕೆ. ಪಿ. ಪೂರ್ಣಚಂದ್ರ ತೇಜಸ್ವಿ
ನಾಟಕ ರೂಪ ಮತ್ತು ನಿರ್ದೇಶನ : ನಟರಾಜ್ ಹೊನ್ನವಳ್ಳಿ
ಸಂಗೀತ : ಗಜಾನನ ಟಿ. ನಾಯ್ಕ
ಸ್ಥಳ : ರಂಗಶಂಕರ, ಜೆ.ಪಿ. ನಗರ. ಬೆಂಗಳೂರು
ದಿನಾಂಕ/ವಾರ : 01/04/2012 ಭಾನುವಾರ
ಸಮಯ : ಮಧ್ಯಾಹ್ನ 3.30 ಹಾಗೂ ಸಂಜೆ 7.30
ಸಂಪರ್ಕಿಸಿ : 99001 82400.
ಟಿಕೆಟ್ ದರ: 70 ರೂಪಾಯಿಗಳು.
ವೆಬ್ ಸೈಟ್ : www.indianstage.in
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications