ದೇವೇಗೌಡರಿಗೂ ಲಂಚದ ಆಫರ್ ಬಂದಿತ್ತು

Bribe offered to then PM Deve Gowda
ಬೆಂಗಳೂರು, ಮಾ.29: ಭಾರತೀಯ ಸೇನೆ ಲಂಚ ಪ್ರಕರಣಕ್ಕೆ ಸಂಸದ, ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ(ಮಾ.29) ಹೊಸ ತಿರುವು ನೀಡಿದ್ದಾರೆ. ನನ್ನ ತಂದೆ ದೇವೇಗೌಡ ಅವರು ಪ್ರಧಾನಿಯಾಗಿದ್ದ ಕಾಲದಲ್ಲೂ ಅವರಿಗೂ ಲಂಚದ ಆಮಿಷ ಒಡ್ಡಲಾಗಿತ್ತು ಎಂದು ಹೊಸ ಬಾಂಬ್ ಹಾಕಿದ್ದಾರೆ.

ರಕ್ಷಣಾ ಇಲಾಖೆಗೆ ಸಂಬಂಧಿಸಿದ ಒಪ್ಪಂದವನ್ನು ಕುದುರಿಸಲು ಮಧ್ಯವರ್ತಿಗಳು ಆಗಿನ(ಜೂನ್ 1996 ಹಾಗೂ ಆಗಸ್ಟ್ 1997 ಅವಧಿಯೊಳಗೆ) ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ್ದರು ಎಂದು ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಆದರೆ, ಮಧ್ಯವರ್ತಿಯ ಹೆಸರನ್ನು ಮಾತ್ರ ಬಹಿರಂಗಪಡಿಸಿಲ್ಲ.

ಭೂಸೇನಾ ಮುಖ್ಯಸ್ಥ ವಿಕೆ ಸಿಂಗ್ ಅವರ ಲಂಚ ಆರೋಪದ ಬಗ್ಗೆ ಪ್ರಸ್ತಾಪಿಸಿದ ಕುಮಾರಸ್ವಾಮಿ, ಈ ರೀತಿ ಲಂಚ ಆಮಿಷ ಹಿಂದಿನಿಂದ ನಡೆದುಬಂದಿದೆ ಎಂದರು. ಲೆ.ಜ ತೇಜಿಂದರ್ ಸಿಂಗ್ ಅವರು 14 ಕೋಟಿ ಲಂಚ ನೀಡಲು ಮುಂದಾಗಿದ್ದರು ಎಂದು ಭೂ ಸೇನಾ ಮುಖ್ಯಸ್ಥ ವಿಕೆ ಸಿಂಗ್ ಆರೋಪಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+