ಅಸಹಾಯಕ ನವವಧುವಿನ ಮೇಲೆ ಪೇದೆ ಬಲಾತ್ಕಾರ

ಅತ್ಯಾಚಾರಕ್ಕೆ ಒಳಗಾದ ಮಹಿಳೆ ಮೈಸೂರು ಜಿಲ್ಲೆಯ ಹೆಗ್ಗಡೆದೇವನ ಕೋಟೆ ತಾಲೂಕಿನ ಸಿಂಗಮಾರನಹಳ್ಳಿಯವಳು. ಕೆಲದಿನಗಳ ಹಿಂದೆ ಮದುವೆಯಾಗಿದ್ದ ಮಹಿಳೆ ಗಂಡ ಮತ್ತು ತನ್ನ ಚಿಕ್ಕಮ್ಮನ ಮಗಳೊಂದಿಗೆ ಹರಕೆ ತೀರಿಸಲೆಂದು ತುಳಜಾಪುರಕ್ಕೆ ಹೋಗುತ್ತಿದ್ದಳು.
ತುಳಜಾಭವಾನಿ ದರುಶನಕ್ಕೆಂದು ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಹೆಂಡತಿಯನ್ನು ನಿಲ್ದಾಣದಲ್ಲಿ ಕೂಡಿಸಿ, ಆಕೆಯ ಚಿಕ್ಕಮ್ಮನ ಮಗಳೊಂದಿಗೆ ನಗರದೊಳಗೆ ಗಂಡ ಪರಾರಿಯಾಗಿದ್ದಾನೆ. ಆಕೆಯ ಪತಿಗೆ ಚಿಕ್ಕಮ್ಮನ ಮಗಳೊಂದಿಗೆ ಅನೈತಿಕ ಸಂಬಂಧವಿತ್ತೆಂದು ತಿಳಿದುಬಂದಿದೆ.
ಸುಮಾರು ಹೊತ್ತು ಅವರು ರೈಲ್ವೆ ನಿಲ್ದಾಣಕ್ಕೆ ಮರಳದಿದ್ದರಿಂದ ವಧು ತಾನೇ ಅವರನ್ನು ಹುಡುಕಲು ನಗರಕ್ಕೆ ಬಂದಿದ್ದಾಳೆ. ಆಕೆ ಅಲ್ಲಿ ಅವರಿವರನ್ನು ವಿಚಾರಿಸುತ್ತ ಏಕಾಂಗಿಯಾಗಿ ಅಲೆದಾಡುತ್ತಿದುದನ್ನು ಪೊಲೀಸ್ ಪೇದೆ ನೋಡಿದ್ದಾನೆ. ಕಣ್ಣೀರುಗರೆಯುತ್ತ ನಿಂತಿದ್ದ ಅವರನ್ನು ಊರಿಗೆ ಮರಳಿಸುವುದಾಗಿ ಪೇದೆ ಭರವಸೆ ನೀಡಿದ್ದಾನೆ.
ಅವನ ಮಾತನ್ನು ನಂಬಿದ ಅಮಾಯಕ ಹೆಂಗಸು ಪೇದೆಯ ಬಲೆಯಲ್ಲಿ ಬಿದ್ದಿದ್ದಾಳೆ. ಆಕೆಯ ಅಸಹಾಯಕತೆಯ ದುರ್ಲಾಭ ಪಡೆದ ಪೇದೆ ವಧುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೇದೆಯ ಹುಡುಕಾಟದಲ್ಲಿ ಪೊಲೀಸರು ತೊಡಗಿದ್ದಾರೆ. ಅತ್ಯಾಚಾರದಿಂದ ಜರ್ಝರಿತಳಾದ ವಧುವನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡನ ಸುಳಿವು ಕೂಡ ಇನ್ನೂ ದೊರೆತಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications