ನಾಗರಿಕ ಸೇವಾ ಖಾತರಿ ಕಾಯ್ದೆ-ಸಕಾಲ ಜಾರಿ

ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಈ ಮಹತ್ವಾಕಾಂಕ್ಷಿ ಯೋಜನೆಗೆ ಸೋಮವಾರ(ಏ.2) ಚಾಲನೆ ನೀಡಿದರು. ನಾಗರಿಕರಿಗೆ ವಿಳಂಬಯಿಲ್ಲದೆ ಸರ್ಕಾರಿ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಸರ್ಕಾರ ಯೋಜನೆ ಇದಾಗಿದೆ.
ನಾಗರಿಕರಿಗೆ ವಿವಿಧ ರೀತಿಯ ಸೇವೆಗಳನ್ನು ಪೂರೈಸುವ 11 ಇಲಾಖೆ-ಕಂದಾಯ, ಶಿಕ್ಷಣ, ಆರ್ಥಿಕ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ಥಳೀಯ ಸಂಸ್ಥೆಗಳು, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ ಮತ್ತು ಆರೋಗ್ಯ ಇಲಾಖೆಗಳ ಒಟ್ಟು 151 ಸೇವೆಗಳನ್ನು ಈ ಕಾಯ್ದೆಯ ವ್ಯಾಪ್ತಿಯಲ್ಲಿ ತರಲಾಗಿದೆ.
ಅರ್ಜಿ ಸಲ್ಲಿಸುವುದು ಸುಲಭ: ವಿವಿಧ ಇಲಾಖೆಗಳಲ್ಲಿ ಸೇವೆಯನ್ನು ಪಡೆಯಲು ಬಯಸುವ ನಾಗರಿಕರು ಸಂಬಂಧಿತ ದಾಖಲೆಗಳು ಮತ್ತು ನಿಗದಿಪಡಿಸಿದ ಶುಲ್ಕದೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಕೂಡಲೆ ಅವರಿಗೊಂದು ರಸೀದಿ ನೀಡಲಾಗುತ್ತದೆ. ಈ ರಸೀದಿಯಲ್ಲಿ 15 ಅಂಕಿಗಳ ಗುರುತಿನ ಸಂಖ್ಯೆಯೊಂದನ್ನು ಗ್ರಾಹಕರಿಗೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ಕೂಡಲೆ ನಾಗರಿಕರು ರಸೀದಿ ಪಡೆಯುವುದು ಕಡ್ಡಾಯವಾಗಿರುತ್ತದೆ.
ಸೇವೆ ಟ್ರ್ಯಾಕ್ ಮಾಡಿ: ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ನೀಡಿದಲ್ಲಿ ಅವರಿಗೆ ಎಸ್ಎಂಎಸ್ ಮೂಲಕ ಅರ್ಜಿಯ ಪ್ರಗತಿಯ ಕುರಿತು ವರದಿ ದೊರಕುತ್ತದೆ. ಮೊಬೈಲ್ ಇಲ್ಲದಿದ್ದಲ್ಲಿ ಅರ್ಜಿದಾರರು ವೆಬ್ ಸೈಟ್ ಮೂಲಕ ತಮ್ಮ ಅರ್ಜಿಯ ಪ್ರಗತಿಯನ್ನು ಪರಿಶೀಲಿಸಬಹುದಾಗಿದೆ.
ಅಥವಾ ಸಕಾಲ ದ ಕಾಲ್ ಸೆಂಟರ್ ಗೆ ಕರೆಮಾಡಿ ಅರ್ಜಿ ಪ್ರಗತಿ ಬಗ್ಗೆ ವಿವರ ಪಡೆಯಬಹುದು.
ಸಂಪರ್ಕ ವಿಳಾಸ : ದೂರವಾಣಿ ಸಂಖ್ಯೆ 080-44554455 ಗೆ ಕರೆಮಾಡಿ
* ಈ ಕಾಯ್ದೆಯ ವೆಬ್ ವಿಳಾಸ www.sakala.kar.nic.in
* ಇ-ಮೇಲ್ ವಿಳಾಸ [email protected]
ಅಂತರ್ಜಾಲ ಮುಖಾಂತರವೂ ಸಾರ್ವಜನಿಕರು ಈ ಕಾಯ್ದೆಯ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ಈ ಪ್ರಗತಿ ಪರಿಶೀಲನೆ ಮತ್ತಿತರ ಎಲ್ಲ ಪ್ರಕ್ರಿಯೆಗಳಿಗೂ ಗ್ರಾಹಕರಿಗೆ ಸ್ವೀಕೃತಿಯಲ್ಲಿ ನೀಡಿದ 15 ಅಂಕಿಯ ಗುರುತಿನ ಸಂಖ್ಯೆಯನ್ನೇ ಬಳಸಬೇಕಾಗಿರುತ್ತದೆ.
ಸೇವೆ ವಿಫಲವಾದರೆ ದಂಡ : ಪ್ರತಿದಿನ ಸಾರ್ವಜನಿಕರಿಂದ ಸ್ವೀಕರಿಸಲಾಗುವ ಅರ್ಜಿಗಳ ಮಾಹಿತಿಯನ್ನು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಪಡೆಯಲಾಗುವುದು. ಸೇವೆ ನೀಡುವಲ್ಲಿ ಲೋಪವಾದರೆ ಸಂಬಂಧಪಟ್ಟ ಅಧಿಕಾರಿಗಳು ದಂಡ ಪಾವತಿಸಬೇಕಾಗುತ್ತದೆ.
ದಂಡ ವಿವರ: ನಾಗರಿಕರಿಗೆ ಸೇವೆಯನ್ನು ಪೂರೈಸುವುದರಲ್ಲಿ ವಿಳಂಬವಾದರೆ ವಿಳಂಬಿತ ಅವಧಿಯಲ್ಲಿ ಪ್ರತಿದಿನಕ್ಕೆ 20-00 ರು.ನಂತೆ ಗರಿಷ್ಠ 500 ರು.ಗಳ ಮಿತಿಯವರೆಗೆ ಸಂಬಂಧಿತ ಸರ್ಕಾರಿ ನೌಕರರು ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಪರಿಹಾರ ಶುಲ್ಕ ನೀಡಬೇಕಿದೆ.
ಇಲ್ಲಿಯವರೆಗೆ ಈ ಕಾಯ್ದೆಯ ಅಡಿ ಎಲ್ಲಾ ಇಲಾಖೆಗಳಲ್ಲಿಯೂ ಒಟ್ಟಾಗಿ 1,32,304 ಅರ್ಜಿಗಳನ್ನು ಸ್ವೀಕರಿಸಿದ್ದು, ಅವುಗಳಲ್ಲಿ 1,12,439 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. [ಲಾಂಛನ ಸೃಷ್ಟಿಸಿದ ಬಾಲಸ್ವಾಮಿ]
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications