ಬಿಜೆಪಿ ಒಳಜಗಳ ಒಪ್ಪಿಕೊಂಡ ಸಿಟಿ ರವಿ

ಇಲ್ಲಿನ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಮತದಾರರು ಮತ್ತು ಕಾರ್ಯಕರ್ತರಿಗೆ ಏರ್ಪಡಿಸಿದ್ದ ಕೃತಜ್ಞತಾ ಸಮರ್ಪಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಿಟಿ ರವಿ ವಿಶ್ಲೇಷಣೆ ವಿವರ ಹೀಗಿದೆ:
ನಮಗೆ ಮತ ನೀಡುತ್ತಾರೆಂದು ನಂಬಿದ್ದ ಜನರೂ ಎಚ್ಚರಿಕೆ ಕೊಟ್ಟಿದ್ದಾರೆ. ಬಹಳಷ್ಟು ಮಂದಿ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಮತ ಹಾಕಲು ಇಚ್ಛೆ ಇಲ್ಲದೆ ಮತ ಚಲಾವಣೆಗೆ ಬರಲೇ ಇಲ್ಲ. ಇದು ನಮ್ಮ ಮತಗಳಿಕೆ ಪ್ರಮಾಣ ಕಡಿಮೆಯಾಗಲು ಕಾರಣವಾಯಿತು.ರಾಜಕೀಯ ವಿರೋಧಿಗಳನ್ನು ಅಂದಾಜು ಮಾಡುವಲ್ಲಿ ನಾವು ವಿಫಲರಾದೆವು. ತಪ್ಪು ಲೆಕ್ಕಾಚಾರ ಹಾಕಿ ನಮ್ಮ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ಎಡವಿದೆವು.
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತನ್ನ ಸ್ವಸಾಮರ್ಥ್ಯದಿಂದ ಲಭಿಸಿದ ಗೆಲುವಲ್ಲ. ಅದು ಸನ್ನಿವೇಶದ ಗೆಲುವಷ್ಟೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾಲಿಗೆ ಗೆಲುವಿನ ಸಂಭ್ರಮ ಹೆಚ್ಚು ದಿನ ಉಳಿಯುವುದಿಲ್ಲ. ನಮ್ಮ ಮುಖಂಡರಲ್ಲಿನ ಗೊಂದಲಗಳಿಂದಾಗಿಯೇ ನಾವು ಗುರಿ ತಲುಪಲು ಸಾಧ್ಯವಾಗಲಿಲ್ಲ. ಕೆಟ್ಟ ರಾಜಕೀಯ ವಾತಾವರಣದ ಪರಿಣಾಮ ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಚರ್ಚೆಗೆ ತರುವಲ್ಲಿ ನಾವು ವಿಫಲವಾದೆವು.
ಜಾತಿಗಂಟ ಜೆಡಿಎಸ್, ಕಾಂಗ್ರೆಸ್ ಛಿದ್ರ: ಜಾತ್ಯತೀತ ಜನತಾದಳದ ಮುಖಂಡರು ತಾವು ಜಾತ್ಯತೀತರೆಂದು ಹೇಳಿಕೊಳ್ಳುತ್ತಾರೆ. ಅವರ ಶಕ್ತಿ ಇರೋದೆ ಜಾತಿಯಲ್ಲಿ. ಜಾತಿ ಹೊರತು ಪಡಿಸಿದರೆ ಅವರು ಒಂದು ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಇಲ್ಲವಾದರೆ ಕಾಂಗ್ರೆಸ್ ಸಾವಿರ ಹೋಳಾಗಿ ಛಿದ್ರವಾಗಿ ಹೋಗುತ್ತದೆ. ಬಿಜೆಪಿ ಆತ್ಮ ಹಿಂದುತ್ವದಲ್ಲಿದೆ. ಹಿಂದುತ್ವ ಒಂದು ಧರ್ಮವಲ್ಲ. ಕೋಮು ಅಲ್ಲ. ಅದೊಂದು ರಾಷ್ಟ್ರೀಯತೆಯ ಸಂಕೇತ ಎಂದು ವಿವರಿಸಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications