ಯಡ್ಡಿಯಿಂದ 'ಬರಗೆಟ್ಟ' ರಾಜಕಾರಣ: ಸಿದ್ದು ಗುದ್ದು

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಘೋಷಣೆಯಾಗಿ 4 ತಿಂಗಳು ಕಳೆದರೂ, ಯಡಿಯೂರಪ್ಪ ಈಗಷ್ಟೇ ಎಚ್ಚೆತ್ತುಕೊಂಡಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಅವರು ಪ್ರವಾಸ ಮಾಡುತ್ತಿದ್ದು, ಅಲ್ಲಿನ ಜನತೆಯ ಮೇಲಿನ ಕಾಳಜಿಯಿಂದಲ್ಲ. ಬದಲಾಗಿ ಪ್ರವಾಸದ ಹೆಸರಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಅಧಿವೇಶನದ ಸಂದರ್ಭ ಸುಮ್ಮನೆ ಕುಳಿತಿದ್ದ ಯಡಿಯೂರಪ್ಪಗೆ ಇದೀಗ ದಿಢೀರನೆ ಬರ ಪೀಡಿತ ಪ್ರದೇಶಗಳ ನೆನಪು ಬಂದಿದೆ ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ, ರೆಸಾರ್ಟ್ ರಾಜಕೀಯದಲ್ಲಿ ತಲ್ಲೀನರಾಗಿದ್ದ ಸಂದರ್ಭದಲ್ಲಿ ಬರ ಪೀಡಿತ ಪ್ರದೇಶದ ಜನರ ಸಮಸ್ಯೆಗಳು ಯಡಿಯೂರಪ್ಪರಿಗೆ ಯಾಕೆ ಅರ್ಥವಾಗಲಿಲ್ಲ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯರಿಂದ ರಾಜಕೀಯ ಕಲಿಯಬೇಕಾಗಿಲ್ಲ (ಬಿಜಾಪುರ ವರದಿ): ಸಿದ್ದರಾಮಯ್ಯರಿಂದ ತಾನು ರಾಜಕೀಯ ಕಲಿಯಬೇಕಾಗಿಲ್ಲ. ಎಲುಬಿಲ್ಲದ ನಾಲಿಗೆಯಲ್ಲಿ ಅವರು ಹೇಗೆ ಬೇಕಾದರೂ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬರ ಪೀಡಿತ ಪ್ರದೇಶಗಳ ಅಧ್ಯಯನ ಪ್ರವಾಸದಲ್ಲಿರುವ ಯಡಿಯೂರಪ್ಪ ಬಿಜಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿ ವಿಫಲರಾಗಿದ್ದಾರೆ. ಅವರು ಬರ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಜನರ ಸಮಸ್ಯೆಗಳನ್ನು ಆಲಿಸಬೇಕಿತ್ತು. ಆದರೆ, ಅವರು ಅದಕ್ಕೆ ಮುಂದಾಗದೆ ತನ್ನ ಕರ್ತವ್ಯವನ್ನು ಮರೆತಿದ್ದಾರೆ. ತನಗೆ ಅವರು ನೀತಿ ಪಾಠ ಹೇಳುವ ಅಗತ್ಯವಿಲ್ಲ ಎಂದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications