ತೆರಿಗೆ ಹಿಂತೆಗೆತ ಭರವಸೆ : ಚಿನ್ನದ ಮುಷ್ಕರ ಅಂತ್ಯ

ಮೇ 11ರವರೆಗೆ ಅಬಕಾರಿ ತೆರಿಗೆ ಇಳಿಸುವ ಕುರಿತು ಚಿಂತಿಸುವುದಾಗಿ ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಸಮಯಾವಕಾಶ ಕೇಳಿದ್ದಾರೆ. ಆದರೆ, ಚಿನ್ನದ ವ್ಯಾಪಾರಿಗಳು ಹೇಳುವುದೇನೆಂದರೆ ಚಿನ್ನದ ವ್ಯಾಪಾರದ ಮೇಲೆ ಅಬಕಾರಿ ಇಲಾಖೆಯ ನೆರಳೇ ಬೀಳಬಾರದು ಎಂಬುದು. ಬಿದ್ದರೆ ವ್ಯಾಪಾರ ಮುಚ್ಚಿಕೊಂಡು ಮನೆಗೆ ಹೋಗಬೇಕಾಗುತ್ತದೆ ಎಂಬುದು ಅವರ ಹೇಳಿಕೆ.
ಈ ಆಶಯದ ಹಿನ್ನೆಲೆಯಲ್ಲಿ, ಅನಿರ್ದಿಷ್ಟ ಕಾಲ ಮುಚ್ಚಿಕೊಂಡಿದ್ದ ಚಿನಿವಾರರು ಬಂಗಾರದ ಅಂಗಡಿಗಳನ್ನು ದೇಶದಾದ್ಯಂತ ಶನಿವಾರ ತೆರೆದಿದ್ದಾರೆ. ಇಂದು ಬೆಳಗಿನಿಂದಲೇ ದೇಶದ ಚಿನ್ನದಂಗಡಿ ಮಾಲಿಕರು ಅಂಗಡಿಗಳನ್ನು ತೆರೆದು ಬಂಗಾರ ಮಾರಾಟದಲ್ಲಿ ತೊಡಗಿದ್ದಾರೆ ಎಂದು ಅಖಿಲ ಭಾರತೀಯ ಸರಾಫ ಅಸೋಸಿಯೇಷನ್ ಅಧ್ಯಕ್ಷ ಶೀಲ ಚಂದ್ ಜೈನ್ ಹೇಳಿದ್ದಾರೆ.
ಈ ಮುಷ್ಕರದಿಂದಾಗಿ ದೇಶದಾದ್ಯಂತ ಚಿನ್ನದ ಉದ್ಯಮಿಗಳು 20 ಸಾವಿರ ಕೋಟಿ ರು.ಗಳನ್ನು ಕಳೆದುಕೊಂಡಿದ್ದರೆ, ಭಾರತದ ಬೊಕ್ಕಸಕ್ಕೆ 1,200 ಕೋಟಿ ರು.ನಷ್ಟು ನಷ್ಟವಾಗಿದೆ. ದೇಶದ ಅನೇಕ ರಾಜ್ಯಗಳಲ್ಲಿ ಈ ಮುಷ್ಕರಕ್ಕೆ ಭಾರೀ ಸ್ಪಂದನೆ ವ್ಯಕ್ತವಾಗಿದ್ದರೆ, ಕರ್ನಾಟಕದಲ್ಲಿ ಚಿನ್ನದ ಉದ್ಯಮಿಗಳಲ್ಲಿ ಒಗ್ಗಟ್ಟು ಅಷ್ಟೊಂದು ಇರದ ಕಾರಣ ಬೆಂಬಲ ಅಷ್ಟೊಂದು ವ್ಯಕ್ತವಾಗಿರಲಿಲ್ಲ.
ಬೆಂಗಳೂರಿನಲ್ಲಿ ಮುಷ್ಕರದಿಂದ ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. 10 ಗ್ರಾಂ ಚಿನ್ನದ ಬೆಲೆ ಸದ್ಯಕ್ಕೆ 26,500 ರು. ಇದೆ. ಮುಷ್ಕರ ಕೊನೆಗೊಂಡಿದ್ದರಿಂದ ಬೆಲೆ ಹೆಚ್ಚುಕಡಿಮೆ ಆಗುವುದಿಲ್ಲ ಅಂತ ಹೇಳುತ್ತಾರೆ ಬೆಂಗಳೂರಿನ ಚಿನ್ನದ ವ್ಯಾಪಾರಿ ಸುನೀಲ್. ಒಂದು ವೇಳೆ ಚಿನ್ನದ ವ್ಯಾಪಾರವನ್ನು ಅಬಕಾರಿ ಇಲಾಖೆಯ ವ್ಯಾಪ್ತಿಯಿಂದ ಹಿಂತೆಗೆದುಕೊಳ್ಳದಿದ್ದರೆ ಮೇ 11ರ ನಂತರ ಮುಷ್ಕರ ಮತ್ತೆ ಮುಂದುವರಿಯುವ ಸಾಧ್ಯತೆಯಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications