ಯುವತಿ ಅಪಹರಿಸಿದ 'ಸ್ವಯಂಕೃಷಿ'ಕ ವೀರೇಂದ್ರಬಾಬು

ಈಗಾಗಲೇ ಸೌಭಾಗ್ಯ ಮತ್ತು ಚಂದ್ರಿಕಾ ಎಂಬ ಇಬ್ಬರು ಹೆಣ್ಣುಮಕ್ಕಳೊಂದಿಗೆ ಮದುವೆಯಾಗಿರುವ ವೀರೇಂದ್ರಬಾಬು ಇನ್ನೂ ಒಂದಿರಲಿ ಎಂದು 23 ವರ್ಷದ ಪಾರ್ವತಿ ಎಂಬ ಯುವತಿಯನ್ನೂ ಅಪಹರಿಸಿಕೊಂಡು ಹೋಗಿದ್ದಾನೆ. ಈ ಬಗ್ಗೆ ಪಾರ್ವತಿಯ ಅಪ್ಪ-ಅಮ್ಮ ದೇವನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.
ಯಲಹಂಕ ಸಮೀಪ ಖಾಸಗಿ ಕಂಪನಿಯಲ್ಲಿದ್ದ ಪಾರ್ವತಿ ಮಾರ್ಚ್ 30ರಿಂದ ಕಾಣೆಯಾಗಿದ್ದಾರೆ. ಅದಕ್ಕೂ ಮುನ್ನ ಒಂದು ವರ್ಷದಿಂದ ವೀರೇಂದ್ರಬಾಬು ಜತೆ ಇವರ ಸ್ನೇಹ ಕುದುರಿತ್ತು. ಪಾರ್ವತಿ, ದೇವನಹಳ್ಳಿಯಲ್ಲಿ ಹತ್ತಾರು ಹೆಸರುಗಳೊಂದಿಗೆ ಚಾಲ್ತಿಯಲ್ಲಿದ್ದ ಸ್ವಯಂಕೃಷಿ ಸಂಸ್ಥೆಯಲ್ಲಿ ಮೂರು ತಿಂಗಳ ಹಿಂದೆ ಕೆಲಸದಲ್ಲಿದ್ದರು.
ಮಾರ್ಚ್ 31ರಂದು ಸ್ವಯಂಕೃಷಿ ಸಂಸ್ಥೆಯ ಮಾಲೀಕ ವೀರೇಂದ್ರಬಾಬು ಅವರ (ಮೊದಲ) ಪತ್ನಿ ಚಂದ್ರಿಕಾ ಅವರು ನನಗೆ ಕರೆ ಮಾಡಿ ನಿಮ್ಮ ಮಗಳು ಪಾರ್ವತಿ ಮತ್ತು ನನ್ನ ಗಂಡ ಹೈದರಾಬಾದಿನಲ್ಲಿದ್ದಾರೆ. ನಿಮ್ಮ ಮಗಳ ನನ್ನ ಗಂಡನನ್ನು ಬಿಡದಿದ್ದರೆ ನಿಮ್ಮ ಮನೆ ಮುಂದೆ ಬಂದು ಗಲಾಟೆ ಮಾಡುತ್ತೇನೆ ಎಂದು ಹೇಳಿರುವುದಾಗಿ' ಪಾರ್ವತಿಯ ಅಪ್ಪ ಸದಾಶಿವ ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಮಧ್ಯೆ, ಎಲ್ಲರಿಗೂ ಫೋನ್ ಮಾಡಿ ತಾನು ವೀರೇಂದ್ರ ಬಾಬು ಜತೆ 'ಸ್ವಯಂ'ಪ್ರೇರಣೆಯಿಂದ ಹೋಗಿರುವುದಾಗಿ ಪಾರ್ವತಿ ಅಲವತ್ತುಕೊಂಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications