ಈ ವಾರ ಯಡಿಯೂರಪ್ಪಗೆ ಸಕತ್ ಸಂಕಷ್ಟಕರ

ಯಡಿಯೂರಪ್ಪ ಕುಟುಂಬ ವರ್ಗದವರಿಗೆ ಸೇರಿದ ಎರಡು ರಿಯಲ್ ಎಸ್ಟೇಟ್ ಕಂಪನಿಗಳು ಗಣಿ ಉದ್ಯಮಿಗಳಿಂದ ಲಂಚ ಪಡೆದಿರುವ ಪ್ರಕರಣವನ್ನು ಸಿಇಸಿ ವಿಚಾರಣೆ ನಡೆಸುತ್ತಿದೆ. ಚಿತ್ರದುರ್ಗ ಗಣಿಗಾರಿಕೆ ಲೈಸನ್ ನವೀಕರಣ ಅಕ್ರಮ ಪ್ರಕರನದಲ್ಲಿ ಯಡಿಯೂರಪ್ಪ ಸೇಫ್ ಆಗಿದ್ದಾರೆ. ಆದರ, ಲಂಚ ಪ್ರಕರಣ ವಿಚಾರಣೆ ಇನ್ನೂ ಬಾಕಿ ಇದೆ.
'ಸುಪ್ರೀಂ ಕೋರ್ಟ್ನ ಅರಣ್ಯಪೀಠ ಏಪ್ರಿಲ್ 13ರಂದು ವಿಚಾರಣೆ ನಡೆಸಲಿರುವ ಈ ಪ್ರಕರಣ ಕರ್ನಾಟಕದ ಇತಿಹಾಸದಲ್ಲಿ ಅದ್ವಿತೀಯವಾಗಿದೆ'ಎಂದು ಸಮಾಜ ಪರಿವರ್ತನ ಸಮುದಾಯದ ಅಧ್ಯಕ್ಷ ಎಸ್ ಆರ್ ಹಿರೇಮಠ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನೇಮಿಸಿರುವ ಕೇಂದ್ರ ಉನ್ನತಾಧಿಕಾರ ಸಮಿತಿ ಮತ್ತು ಅರಣ್ಯ ಪೀಠ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಲಿದೆ.
ಕೇಂದ್ರ ಉನ್ನತಾಧಿಕಾರ ಸಮಿತಿಯೂ ಸಹ ತನ್ನ ಅಂತಿಮ ತೀರ್ಪನ್ನು ಇದೇ ವೇಳೆಯಲ್ಲಿ ನೀಡಲಿದೆ. ಯಡಿಯೂರಪ್ಪನವರ ಕುಟುಂಬದ ಸದಸ್ಯರು ಅಕ್ರಮ ಗಣಿಗಾರಿಕೆ ನಡೆಸುವ ಉದ್ಯಮಿಗಳಿಂದ ಲಂಚ ಪಡೆದಿರುವುದರ ಬಗ್ಗೆ 314 ಪುಟಗಳ ವರದಿಯನ್ನು ಸಲ್ಲಿಸಿರುವ ಎನ್ಸಿಎನ್ಪಿಆರ್ ಸಂಘಟನೆ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮನವಿ ಸಲ್ಲಿಸಿದೆ.
ಜೆಎಸ್ಡಬ್ಲ್ಯು ಸ್ಟೀಲ್ಸ್ ಮತ್ತು ಅದಾನಿ ಎಂಟರ್ಪ್ರೈಸಸ್ ಕಂಪನಿಗಳು ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಿರುವುದರ ಬಗ್ಗೆ ಸಿಇಸಿ ತನ್ನತೀರ್ಪು ನೀಡಲಿದೆ. ಈ ಎರಡೂ ಕಂಪನಿಗಳ ವ್ಯವಹಾರಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ವಕೀಲ ಪ್ರಶಾಂತ್ ಭೂಷಣ್ ಕೋರಿದ್ದಾರೆ.
ಈ ಎರಡೂ ಕಂಪನಿಗಳು ಮತ್ತು ಯಡಿಯೂರಪ್ಪ ತಮ್ಮ ಪ್ರತಿಕ್ರಿಯೆಯನ್ನು ಏಪ್ರಿಲ್ 9ರಂದು ನ್ಯಾಯಾಲಯಕ್ಕೆ ಸಲ್ಲಿಸಲಿದ್ದು ಏಪ್ರಿಲ್ 11ರಂದು ಎನ್ಸಿಪಿಎನ್ಆರ್ ತನ್ನ ವಾದವನ್ನು ಮಂಡಿಸಲಿದೆ ಎಂದು ಹಿರೇಮಠ್ ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪದವಿ ಮರಳಿ ಪಡೆಯಲು ಯಡಿಯೂರಪ್ಪ ಹರಸಾಹಸ ಪಡುತ್ತಿದ್ದಾರೆ. ಆದರೆ, ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ಅವರ ಮುಂದಿನ ಭವಿಷ್ಯ ನಿರ್ಧಾರವಾಗಲಿದೆ.
ಇದಕ್ಕೆ ಪೂರಕವಾಗಿ ಏ.15ರ ತನಕ ಕಾಯುವುದು ಉತ್ತಮ ಎಂದು ಬೆಂಗಳೂರಿಗೆ ಬಂದಿದ್ದ ದೆಹಲಿ ವರಿಷ್ಠ ಧರ್ಮೇಂದ್ರ ಪ್ರಧಾನ್ ಅವರು ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications