ಗೌಡರೇ ಜಿಮ್ ಗೆ ಹೋಗಬೇಡಿಪ್ಪಾ: ಯಡಿಯೂರಪ್ಪ

ಜಿಲ್ಲೆಯಲ್ಲಿ ಬರ ಅಧ್ಯಯನ ಪ್ರವಾಸದಲ್ಲಿರುವ ಮಾಜಿ ಸಿಎಂ ಬುಧವಾರ ಬೆಳಗ್ಗೆ ಹಾಲಿ ಸಿಎಂಗೆ ಹೀಗೆ ವಿನಂತಿ ಮಾಡಿದ್ದಾರೆ: ರಾಜ್ಯದ ಮುಕ್ಕಾಲು ಭಾಗ ಬರದಿಂದ ತತ್ತರಿಸುತ್ತಿದೆ. ಇಂತಹ ಸಂಕಟದ ಸ್ಥಿತಿಯಲ್ಲಿ ಉದ್ಯಮಿಗಳಿಂದ ಬಂಡವಾಳ ಆಕರ್ಷಿಸಲು ವಿದೇಶ ಪ್ರವಾಸ ಕೈಗೊಳ್ಳುವುದು ವಿಪರ್ಯಾಸವಾದೀತು. ಆದ್ದರಿಂದ ವಿದೇಶಕ್ಕೆ ಹೋಗುವ ಬಗ್ಗೆ ಮತ್ತೊಮ್ಮೆ ಆಲೋಚಿಸಿ' ಎಂದಿದ್ದಾರೆ.
ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹಾಗೂ ಅಧಿಕಾರಿಗಳ ದಂಡಿನೊಂದಿಗೆ (Global Investors Meet- GIM) ಇದೇ 15 ರ ರಾತ್ರಿ ಬೆಂಗಳೂರಿನಿಂದ ಹೊರಡಲು ಸಿದ್ಧತೆ ನಡೆಸಿದ್ದಾರೆ. ಸಿಂಗಾಪುರ ಮತ್ತು ಜಪಾನ್ ಸುತ್ತಾಡಿ, ಅಲ್ಲಿನ ಬಂಡವಾಳಶಾಹಿಗಳನ್ನು ಭೇಟಿ ಮಾಡಿ ಏ. 21ಕ್ಕೆ ವಾಪಸಾಗಲಿದ್ದಾರೆ. ಬರಗಾಲದ ಪರಿಸ್ಥಿತಿಯಲ್ಲಿ ಜನರಿಗೆ ಅಭಯ ನೀಡಬೇಕಾಗಿರುವುದು ಯಾವುದೋ ದೇವರು ದಿಂಡಿರು ಅಲ್ಲ. ಬದಲಿಗೆ ಕಂದಾಯ ಸಚಿವರು. ಆದರೆ ಖುದ್ದು ಸದಾನಂದ ಗೌಡರೇ ಆ ಖಾತೆಯ ಹೊಣೆಹೊತ್ತಿರುವಾಗ ಇದ್ಯಾತರದ್ದು ವಿದೇಶ ಪ್ರವಾಸ ಎಂದು ಮಂದಿ ಕೇಳುವಂತಾಗಿದೆ.
ರಾಜ್ಯದ ಜನತೆಯನ್ನು ಕಂಗಾಲು ಮಾಡಿರುವ ಬರಗಾಲವನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ಅಧ್ಯಯನ ಮಾಡಲು ಗೌಡರು ವಿದೇಶಕ್ಕೆ ಹೊರಟಿರಬಹುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಹ ವ್ಯಂಗ್ಯವಾಡಿದ್ದಾರೆ. ಇನ್ನು, ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಅವರೂ ಕಿಡಿಕಾರಿದ್ದಾರೆ - ಕೇಂದ್ರಕ್ಕೆ ಬರ ವರದಿ ಸಲ್ಲಿಸಿ, ಹೆಚ್ಚಿನ ಅನುದಾನ ತಂದು ಜನರಿಗೆ ಅನುಕೂಲ ಮಾಡಿಕೊಡಬೇಕಾದ ಮುಖ್ಯಮಂತ್ರಿಗಳು ಬಂಡವಾಳ ಆಕರ್ಷಣೆ ನೆಪದಲ್ಲಿ ವಿದೇಶಕ್ಕೆ ಹೊರಟಿರುವುದು ನಾಡಿನ ದುರಂತ ಎಂದಿದ್ದಾರೆ.
when the rome is burning ... ನೀವೆನನ್ನುತ್ತೀರಿ!?
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications