ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ, ಬೆಂಗಳೂರಲ್ಲೂ

ಬೆಂಗಳೂರಿನ ಜಯನಗರ, ಕೋರಮಂಗಲ, ಇನ್ಫಂಟ್ರಿ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಸರ್ಜಾಪುರ, ಹಳೆ ಏರ್ ಪೋರ್ಟ್ಗಳಲ್ಲಿ ಮಧ್ಯಾಹ್ನ 2.20ರ ಸುಮಾರಿಗೆ ಕಂಪಿಸಿದ ಅನುಭವವಾಗಿದ್ದು, ಎತ್ತರದ ಕಚೇರಿ, ಅಪಾರ್ಟ್ಮೆಂಟ್ಗಳಲ್ಲಿದ್ದ ಜನ ಹೆದರಿ ಓಡಿ ಬಂದಿದ್ದಾರೆ. ಕೆಳಮಹಡಿಯಲ್ಲಿದ್ದವರಿಗೆ ಕಂಪಿಸಿದ ಅನುಭವವಾಗಿಲ್ಲ. ಕಂಪನದ ಅನುಭವವಾಗುತ್ತಿದ್ದಂತೆ ಜನ ಅಡ್ಡಾದಿಡ್ಡಿ ಓಡಿದ್ದರಿಂದ ಮೆಟ್ರೋ ರೈಲನ್ನು ಮಾರ್ಗಮಧ್ಯದಲ್ಲಿಯೇ ನಿಲ್ಲಿಸಲಾಯಿತು.
ಬೆಂಗಳೂರಿಗಿಂತ ಚೆನ್ನೈನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಕಂಪನದ ಅನುಭವವಾಗುತ್ತಿದ್ದಂತೆ ಹೆದರಿಕೆಯಿಂದ ಜನರು ಕಚೇರಿಯಿಂದ ಹೊರಗೆ ಓಡಿಬಂದಿದ್ದಾರೆ. ಕಟ್ಟಡಗಳಲ್ಲಿ ಅಲ್ಲಲ್ಲಿ ಸಣ್ಣಬಿರುಕುಗಳು ಕಂಡುಬಂದಿವೆ. ಸುನಾಮಿ ಸಂಭವನೀಯತೆ ಇರುವುದರಿಂದ ಕಡಲ ಬಳಿಗೆ ಯಾರೂ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಕರಾವಳಿಯಲ್ಲಿಯೂ ಕಡಲಿಗಿಳಿಯುವ ಸಾಹಸ ಮಾಡದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಸುನಾಮಿ ಎಚ್ಚರಿಕೆ : ಇಂಡೋನೇಷ್ಯಾದಲ್ಲಿ 2006ರ ಡಿಸೆಂಬರ್ 26ರಂದು ಸಂಭವಿಸಿದ ಭೂಕಂಪ ಸಂಭವಿಸಿ, ಸುನಾಮಿ ಹೊಡೆತ ನೀಡಿದ್ದ ನಂತರ ಇದು ಅತ್ಯಂತ ಪ್ರಬಲ ಭೂಕಂಪ ಎನ್ನಲಾಗಿದೆ. ಭೂಕಂಪದ ಕೇಂದ್ರಬಿಂದು ಉತ್ತರ ಸುಮಾತ್ರಾದ ಸಮುದ್ರದಲ್ಲಿ 33 ಕಿ.ಮೀ. ಆಳದಲ್ಲಿದೆ. ಸರಿಯಾಗಿ 2 ಗಂಟೆ 8 ನಿಮಿಷಕ್ಕೆ ಭೂಕಂಪ ಸಂಭವಿಸಿದೆ.
ಇಂಡೋನೇಷ್ಯಾದಲ್ಲಿ ಸುನಾಮಿಯ ಎಚ್ಚರಿಕೆ ನೀಡಲಾಗಿದ್ದು, ಜಪಾನ್, ಪಾಕಿಸ್ತಾನ, ಬಾಂಗ್ಲಾದೇಶ, ಮಲೇಶಿಯಾ, ಥೈಲ್ಯಾಂಡ್, ಶ್ರೀಲಂಕಾ ಮತ್ತು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿಯಲ್ಲಿಯೂ ಜನ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ಒಟ್ಟು 28 ರಾಷ್ಟ್ರಗಳಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications