ಯುವ ನೇತಾರನಿಗೆ ಜೈ ಎಂದ ಸಂತೋಷ್ ಹೆಗ್ಡೆ

"ಕರ್ನಾಟಕದ ಜನತೆಗೆ ಒಳ್ಳೆಯ ಜನ ಇನ್ನು ಮುಂದೆ ಸುಮ್ಮನೆ ಕೂರುವುದಿಲ್ಲ. ದುಷ್ಟ ಶಕ್ತಿಗಳು ಹಣ ಮತ್ತು ಹೆಂಡದಿಂದ ಮತಗಳನ್ನು ಖರಿದೀಸುತ್ತಿರಬಹುದು, ಆದರೆ ಎಲ್ಲ ಸಜ್ಜನರು ಒಗ್ಗಟ್ಟಾಗಿ ಒಂದೇ ಧ್ವನಿಯಲ್ಲಿ ಮುಂದೆ ಬಂದರೆ ಗೆಲುವು ನಮ್ಮದೇ" ಎಂಬ ಸಂದೇಶವನ್ನು ಕರ್ನಾಟಕದ ಮಾಜಿ ಲೋಕಾಯುಕ್ತ ರವಾನಿಸಿದರು.
ನೆರೆದ ಜನರನ್ನು ಉದ್ದೇಶಿಸಿ ಮಾತನಾಡುತ್ತಾ ನ್ಯಾಯಮೂರ್ತಿ ಸಂತೋಷ್ ಹೆಗಡೆ, "ಈ ಚನಾವಣೆಗೆ ಎಲ್ಲ ಪದವೀಧರರು ನೊಂದಯಿಸಿಕೊಂಡು ಮತ ಚಲಾಯಿಸುವುದಲ್ಲದೇ, ಪ್ರಮುಖವಾಗಿ ಎಲ್ಲ ರೀತಿಯಿಂದಲೂ ಅರ್ಹ ಅಭ್ಯರ್ಥಿಯಾದ ಡಾ. ಅಶ್ವಿನ್ ಮಹೇಶ್ ಅವರಿಗೆ ಮತ ಚಲಾಯಿಸಬೇಕೆಂದು ಕೇಳಿಕೊಳ್ಳುವೆ. ಅಶ್ವಿನ್ ಅವರನ್ನು ನಾನು ಕೆಲವು ವರ್ಷಗಳಿಂದ ಬಲ್ಲೆ, ಅವರ ದೂರದೃಷ್ಟಿತ್ವ, ಸಾಮಾಜಿಕ ಕಳಕಳಿ, ಪ್ರಾಮಾಣಿಕತೆ ಮತ್ತು ಸೇವೆಯನ್ನು ನಾನು ಬೆಂಬಲಿಸುತ್ತೇನೆ" ಎಂದರು.
ಕಳೆದ ಎರಡು ದಶಕಗಳಿಂದಲೂ ಒಂದು ರಹಸ್ಯ ಚುನಾವಣೆಯಾಗಿ ಮಾರ್ಪಟ್ಟಿದ್ದು, ಪದವೀಧರರ ಕ್ಷೇತ್ರದ ಚುನಾವಣೆಗಳು ಈಗ ಜನಸಾಮಾನ್ಯರಲ್ಲಿ ಇದರ ಬಗ್ಗೆ ಅರಿವು ಮೂಡುತ್ತಿದೆ. 20 ಲಕ್ಷ ಅರ್ಹ ಪದವೀಧರರಲ್ಲಿ ಕೇವಲ 90,000 ಜನ, ಅಂದರೆ ಶೇ.5ಕ್ಕಿಂತಲೂ ಕಡಿಮೆ ಮತದಾರರಿದ್ದಾರೆ. ಇತ್ತೀಚೆಗೆ ಕರ್ನಾಟಕದ ಮುಖ್ಯ ನ್ಯಾಯಾಲಯವು ಈ ಕುರಿತು ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ ಎಂದು ಲೋಕಸತ್ತಾ ಪಕ್ಷದ ಬೆಂಗಳೂರು ಜಿಲ್ಲಾ ಅಧ್ಯಕ್ಷರಾದ ಡಾ. ಮೀನಾಕ್ಷಿ ಭರತ್ ಅವರು ಹೇಳಿದರು.
ಡಾ. ಅಶ್ವಿನ್ ಮಹೇಶ್ : ಖಗೋಳ ಹಾಗೂ ವಾಯುಮಂಡಲ ವಿಜ್ಞಾನಿಯಾಗಿ ತರಬೇತಿ ಪಡೆದಿರುವ ಡಾ. ಮಹೇಶ್ ಅಮೆರಿಕದ ಪ್ರತಿಷ್ಠಿತ ನಾಸಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಡಾ. ಮಹೇಶ್ ತಮ್ಮ ವೃತ್ತಿ ಜೀವನವನ್ನು ನಕ್ಷತ್ರಗಳ ರಚನೆ, ಜಾಗತಿಕ ಹವಾಮಾನ ಬದಲಾವಣೆ, ನಗರೀಕರಣ ಹಾಗೂ ಸಾರ್ವಜನಿಕ ಸಾರಿಗೆ ಮುಂತಾದ ವಿಷಯಳ ಕುರಿತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದರು.
ಸದ್ಯ ಅವರು ಸಂಶೋಧನಕಾರರಾಗಿ Centre of Excellence in Urban Governance, IIMB, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗೆಯೇ ನಗರ ಸಾರಿಗೆ ಮತ್ತು ಚಲನಶೀಲತೆ ಕುರಿತು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc)ನಲ್ಲಿ ಸಂಶೋಧನೆ ಮಾಡುತ್ತಿದ್ದಾರೆ. ಇವುಗಳ ಜೊತೆಗೆ ಅವರು IIITಯಲ್ಲಿ ಬೋಧನಾ ಸಿಬ್ಬಂದಿಯಾಗಿ ಹಾಗೂ ಮ್ಯಾಪಯೂನಿಟಿ ಎಂಬ ಸಾಮಾಜಿಕ ತಂತ್ರಜ್ಞಾನ ಕಂಪನಿಯ ಮುಖ್ಯಸ್ಥರಾಗಿಯೂ ಕೆಲಸ ಮಾಡುತ್ತಿದ್ದಾರೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications