ಯುವ ನೇತಾರನಿಗೆ ಜೈ ಎಂದ ಸಂತೋಷ್ ಹೆಗ್ಡೆ

"ಕರ್ನಾಟಕದ ಜನತೆಗೆ ಒಳ್ಳೆಯ ಜನ ಇನ್ನು ಮುಂದೆ ಸುಮ್ಮನೆ ಕೂರುವುದಿಲ್ಲ. ದುಷ್ಟ ಶಕ್ತಿಗಳು ಹಣ ಮತ್ತು ಹೆಂಡದಿಂದ ಮತಗಳನ್ನು ಖರಿದೀಸುತ್ತಿರಬಹುದು, ಆದರೆ ಎಲ್ಲ ಸಜ್ಜನರು ಒಗ್ಗಟ್ಟಾಗಿ ಒಂದೇ ಧ್ವನಿಯಲ್ಲಿ ಮುಂದೆ ಬಂದರೆ ಗೆಲುವು ನಮ್ಮದೇ" ಎಂಬ ಸಂದೇಶವನ್ನು ಕರ್ನಾಟಕದ ಮಾಜಿ ಲೋಕಾಯುಕ್ತ ರವಾನಿಸಿದರು.
ನೆರೆದ ಜನರನ್ನು ಉದ್ದೇಶಿಸಿ ಮಾತನಾಡುತ್ತಾ ನ್ಯಾಯಮೂರ್ತಿ ಸಂತೋಷ್ ಹೆಗಡೆ, "ಈ ಚನಾವಣೆಗೆ ಎಲ್ಲ ಪದವೀಧರರು ನೊಂದಯಿಸಿಕೊಂಡು ಮತ ಚಲಾಯಿಸುವುದಲ್ಲದೇ, ಪ್ರಮುಖವಾಗಿ ಎಲ್ಲ ರೀತಿಯಿಂದಲೂ ಅರ್ಹ ಅಭ್ಯರ್ಥಿಯಾದ ಡಾ. ಅಶ್ವಿನ್ ಮಹೇಶ್ ಅವರಿಗೆ ಮತ ಚಲಾಯಿಸಬೇಕೆಂದು ಕೇಳಿಕೊಳ್ಳುವೆ. ಅಶ್ವಿನ್ ಅವರನ್ನು ನಾನು ಕೆಲವು ವರ್ಷಗಳಿಂದ ಬಲ್ಲೆ, ಅವರ ದೂರದೃಷ್ಟಿತ್ವ, ಸಾಮಾಜಿಕ ಕಳಕಳಿ, ಪ್ರಾಮಾಣಿಕತೆ ಮತ್ತು ಸೇವೆಯನ್ನು ನಾನು ಬೆಂಬಲಿಸುತ್ತೇನೆ" ಎಂದರು.
ಕಳೆದ ಎರಡು ದಶಕಗಳಿಂದಲೂ ಒಂದು ರಹಸ್ಯ ಚುನಾವಣೆಯಾಗಿ ಮಾರ್ಪಟ್ಟಿದ್ದು, ಪದವೀಧರರ ಕ್ಷೇತ್ರದ ಚುನಾವಣೆಗಳು ಈಗ ಜನಸಾಮಾನ್ಯರಲ್ಲಿ ಇದರ ಬಗ್ಗೆ ಅರಿವು ಮೂಡುತ್ತಿದೆ. 20 ಲಕ್ಷ ಅರ್ಹ ಪದವೀಧರರಲ್ಲಿ ಕೇವಲ 90,000 ಜನ, ಅಂದರೆ ಶೇ.5ಕ್ಕಿಂತಲೂ ಕಡಿಮೆ ಮತದಾರರಿದ್ದಾರೆ. ಇತ್ತೀಚೆಗೆ ಕರ್ನಾಟಕದ ಮುಖ್ಯ ನ್ಯಾಯಾಲಯವು ಈ ಕುರಿತು ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ ಎಂದು ಲೋಕಸತ್ತಾ ಪಕ್ಷದ ಬೆಂಗಳೂರು ಜಿಲ್ಲಾ ಅಧ್ಯಕ್ಷರಾದ ಡಾ. ಮೀನಾಕ್ಷಿ ಭರತ್ ಅವರು ಹೇಳಿದರು.
ಡಾ. ಅಶ್ವಿನ್ ಮಹೇಶ್ : ಖಗೋಳ ಹಾಗೂ ವಾಯುಮಂಡಲ ವಿಜ್ಞಾನಿಯಾಗಿ ತರಬೇತಿ ಪಡೆದಿರುವ ಡಾ. ಮಹೇಶ್ ಅಮೆರಿಕದ ಪ್ರತಿಷ್ಠಿತ ನಾಸಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಡಾ. ಮಹೇಶ್ ತಮ್ಮ ವೃತ್ತಿ ಜೀವನವನ್ನು ನಕ್ಷತ್ರಗಳ ರಚನೆ, ಜಾಗತಿಕ ಹವಾಮಾನ ಬದಲಾವಣೆ, ನಗರೀಕರಣ ಹಾಗೂ ಸಾರ್ವಜನಿಕ ಸಾರಿಗೆ ಮುಂತಾದ ವಿಷಯಳ ಕುರಿತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದರು.
ಸದ್ಯ ಅವರು ಸಂಶೋಧನಕಾರರಾಗಿ Centre of Excellence in Urban Governance, IIMB, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗೆಯೇ ನಗರ ಸಾರಿಗೆ ಮತ್ತು ಚಲನಶೀಲತೆ ಕುರಿತು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc)ನಲ್ಲಿ ಸಂಶೋಧನೆ ಮಾಡುತ್ತಿದ್ದಾರೆ. ಇವುಗಳ ಜೊತೆಗೆ ಅವರು IIITಯಲ್ಲಿ ಬೋಧನಾ ಸಿಬ್ಬಂದಿಯಾಗಿ ಹಾಗೂ ಮ್ಯಾಪಯೂನಿಟಿ ಎಂಬ ಸಾಮಾಜಿಕ ತಂತ್ರಜ್ಞಾನ ಕಂಪನಿಯ ಮುಖ್ಯಸ್ಥರಾಗಿಯೂ ಕೆಲಸ ಮಾಡುತ್ತಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications