ಸರ್ಕಾರ vs ಉಪನ್ಯಾಸಕರು, ಪೋಷಕರು ತತ್ತರ

ಸರ್ಕಾರದ ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮಣಿಯದಿರುವಂತೆ ಶಿಕ್ಷಕರಿಗೆ ಕರೆ ನೀಡಿರುವ ಪುಟ್ಟಣ್ಣ, ಇದು ಅಂತಿಮ ಹೋರಾಟ ಎಂದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೀಡುಬಿಟ್ಟಿರುವ ಸಾವಿರಾರು ಉಪನ್ಯಾಸಕರು ಅಹೋರಾತ್ರಿ ಮುಷ್ಕರಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿ ಬಂದಿದೆ.
ಈ ನಡುವೆ ಬಿಕ್ಕಟ್ಟು ಬೇಗ ಬಗೆಹರಿಯಲಿದೆ. ಅನುದಾನ ರಹಿತ ಕಾಲೇಜಿನ ಉಪನ್ಯಾಸಕರನ್ನು ಕರೆ ತಂದು ಮೌಲ್ಯಮಾಪನ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಪೋಷಕರು ಆತಂಕಗೊಳ್ಳಬೇಕಾಗಿಲ್ಲ ಎಂದು ಶಿಕ್ಷಣ ಇಲಾಕೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ಹೇಳಿದ್ದಾರೆ.
ಸಿಎಂ ಸದಾನಂದ ಗೌಡ ಕೂಡಾ ಮುಷ್ಕರ ನಿರತ ಉಪನ್ಯಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಆದರೆ, ಎಸ್ಮಾ ಜಾರಿ ಬಗ್ಗೆ ಯಾವುದೇ ಸುಳಿವು ನೀಡಿಲ್ಲ.
ಬೇಡಿಕೆ ಏನು?: 2009ರಲ್ಲಿ ನೇಮಕವಾದ 2500 ಉಪನ್ಯಾಸಕರ ಪೂರ್ವಸೇವಾ ಅವಧಿಯನ್ನು ಘೋಷಿಸಬೇಕು.
* ಪ್ರೌಡಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಪ್ರತ್ಯೇಕವಾಗಿರಬೇಕು.
* ಪಿಎಚ್ ಡಿ, ಎಂಫಿಲ್ ಪದವಿ ಪಡೆದವರಿಗೆ ಕಾಲೇಜು ಉಪನ್ಯಾಸಕರಾಗಿ ಬಡ್ತಿ ನೀಡಬೇಕು.
10 ದಿನಗಳ ಮೌಲ್ಯಮಾಪನ ಬಹಿಷ್ಕಾರದಿಂದ 1.5 ಕೋಟಿ ರು ನಷ್ಟವಾಗಿದೆ. 29,000 ರು ಸಂಬಳ ನೀಡಲಾಗುತ್ತಿದೆ. ಮುಷ್ಕರದ ಅವಧಿಯಲ್ಲೂ ಉಪನ್ಯಾಸಕರಿಗೆ ಸಂಬಳ ನೀಡಲಾಗುತ್ತಿದೆ ಎಂದು ಪಿಯೂ ಶಿಕ್ಷಣ ಮಂಡಳಿ ನಿರ್ದೇಶಕಿ ರಶ್ಮಿ ಮಹೇಶ್ ಪ್ರತಿಕ್ರಿಯಿಸಿದ್ದಾರೆ.
ಸರ್ಕಾರ ಬೇಡಿಕೆಗಳಿಗೆ ಒಪ್ಪದಿದ್ದರೆ ಏ.23ರಿಂದ ಆರಂಭವಾಗಬೇಕಿರುವ ಎಸ್ಎಸ್ ಎಲ್ ಸಿ ಮೌಲ್ಯಮಾಪನ ಕೂಡಾ ಬಹಿಷ್ಕರಿಸಲು ಶಿಕ್ಷಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications