ಬಹಿಷ್ಕಾರ ವಾಪಸ್ : ಮೌಲ್ಯಮಾಪನಕ್ಕೆ ಶಿಕ್ಷಕರು ಹಾಜರ್

ಶಾಸಕರ ಭವನದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಶಿಕ್ಷಕರ ಸಂಘದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಶಿಕ್ಷಕರು ತಳೆದಿದ್ದಾರೆ. ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ 37 ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಶಿಕ್ಷಕರು ಹಾಜರಾಗಲಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ಎಸ್ ದೊರೆಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಕರ ಕೋರ್ ಕಮಿಟಿ ಸಭೆ ನಡೆದಿದೆ.
ಮೌಲ್ಯಮಾಪನ ಬಹಿಷ್ಕಾರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಅವರನ್ನು ಸಂಕಷ್ಟಕ್ಕೀಡು ಮಾಡಬಾರದು ಎಂಬ ಉದ್ದೇಶದಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಕೋರ್ ಕಮಿಟಿ ಹೇಳಿದೆ. ಬಹಿಷ್ಕಾರ ಹಿಂತೆಗೆಯಲು ಯಾವುದೇ ಷರತ್ತುಗಳನ್ನು ಸರಕಾರದ ಮುಂದಿಟ್ಟಿಲ್ಲ. ಆದರೆ, ಸರಕಾರ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವ ಭರವಸೆಯಿಂದ ಮುಷ್ಕರ ಹಿಂತೆಗೆದುಕೊಳ್ಳಲಾಗಿದೆ ಎಂದು ದೊರೆಸ್ವಾಮಿ ತಿಳಿಸಿದ್ದಾರೆ.
ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಅನಿವಾಸಿ ವೇದಿಕೆಯ ಉಪಾಧ್ಯಕ್ಷ ಕ್ಯಾ. ಗಣೇಶ್ ಕಾರ್ಣಿಕ್, ಎಚ್ ಎಸ್ ದೊರೆಸ್ವಾಮಿ ಮತ್ತು ಶಿಕ್ಷಕರು ಭಾಗವಹಿಸಿದ್ದರು. ಬ್ಲಾಕ್ಮೇಲ್ ಮಾಡಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಸಲ್ಲ ಮತ್ತು ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯದೊಡನೆ ಆಟವಾಡುವುದು ಹಿತವಲ್ಲ ಎಂಬ ಕಿವಿಮಾತಿಗೆ ಶಿಕ್ಷಕರು ಬಗ್ಗಿದ್ದಾರೆ.
ಮೌಲ್ಯಮಾಪನವನ್ನು ಶಿಕ್ಷಕರು ಬಹಿಷ್ಕರಿಸದಿದ್ದರೆ ಏ.19ರೊಳಗೆ ಮೌಲ್ಯಮಾಪನ ಮುಗಿದು, ಏ. 26ರ ಹೊತ್ತಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬರುವ ಸಂಭವನೀಯತೆಯಿತ್ತು. ಮೌಲ್ಯಮಾಪನ ತಡವಾಗಿದ್ದರಿಂದ ಮೇ ಮೊದಲ ವಾರದಲ್ಲಿ ಫಲಿತಾಂಶ ಬರುವ ಸಂಭವನೀಯತೆಯಿದೆ. ಮೌಲ್ಯಮಾಪನಕ್ಕೆ ಶಿಕ್ಷಕರು ಹಾಜರಾಗುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಹೆಪ್ಪುಗಟ್ಟಿದ್ದ ಆತಂಕದ ಕಾರ್ಮೋಡ ಕರಗಿದಂತಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications