ಎಚ್ಡಿಕೆ, ಚೆನ್ನಿಗಪ್ಪ ವಿರುದ್ಧ ಚಾರ್ಚ್ ಶೀಟ್ ಸಲ್ಲಿಕೆ

ಚಾಮರಾಜನಗರದ ಎಂಎಸ್ ಮಹದೇವಸ್ವಾಮಿ ಎಂಬುವವರು ಜ.2ರಂದು ದಾಖಲಿಸಿದ್ದ ಖಾಸಗಿ ದೂರಿನ ಅನ್ವಯ ಲೋಕಾಯುಕ್ತ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ತನಿಖಾಧಿಕಾರಿ ರವಿಶಂಕರ್ ಅವರು 52 ಪುಟಗಳ ಚಾರ್ಜ್ ಶೀಟ್ ಹಾಗೂ 1600 ಪುಟಗಳ ದಾಖಲೆಗಳುಳ್ಳ ವರದಿಯನ್ನು ಲೋಕಾಯುಕ್ತ ಕೋರ್ಟಿಗೆ ಸಲ್ಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಮನ್ಸ್ ನೀಡಬೇಕೇ? ಬೇಡವೇ? ಎಂಬುದರ ಬಗ್ಗೆ ಏ.21ರಂದು ಕೋರ್ಟ್ ಆದೇಶ ನೀಡಲಿದೆ.
ಐಪಿಸಿ ಸೆಕ್ಷನ್ 182, 420ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅನ್ವಯ ಪ್ರಕರಣದ ತನಿಖೆ ನಡೆಸಲಾಗಿತ್ತು.
2007ರ ಅಕ್ಟೋಬರ್ನಲ್ಲಿ ಥಣಿಸಂದ್ರ ಗ್ರಾಮದಲ್ಲಿ 3.8 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಲು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶಿಸಿದ್ದರು. ಅಂದಿನ ಅರಣ್ಯ ಸಚಿವರಾಗಿದ್ದ ಚೆನ್ನಿಗಪ್ಪ ಕೂಡ ಕುಮಾರಸ್ವಾಮಿ ಜೊತೆ ಈ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಡಿನೋಟಿಫೈ ಆದ ಜಮೀನಿನಿಂದ 44 ನಿವೇಶನಗಳನ್ನು ರೂಪಿಸಿ ಹಂಚಲಾಗಿದೆ. ಸರ್ಕಾರಕ್ಕೆ ಸುಮಾರು 50-60 ಕೋಟಿ ನಷ್ಟವಾಗಿದೆ ಎಂದು ಸರ್ಕಾರಿ ಅಭಿಯೋಜಕರಾಗಿದ್ದ ಪಂಚಾಕ್ಷರಿ ಮಠ್ ವಿವರಿಸಿದ್ದಾರೆ.












Click it and Unblock the Notifications