ರಾಜಕೀಯ: ಚೀನಾದಲ್ಲಿ 42 ವೆಬ್ಸೈಟ್ಗಳಿಗೆ ಗುನ್ನಾ

ಆದ್ದರಿಂದ ಇಂತಹ ಆನ್ಲೈನ್ ವದಂತಿಗಳಿಗೆ ಕಡಿವಾಣ ಹಾಕಲು ಚೀನಾ ಆಡಳಿತ, ಕಳೆದೊಂದು ತಿಂಗಳಲ್ಲಿ 42 websiteಗಳನ್ನು ಕಿತ್ತುಹಾಕಿದೆ. ಜತೆಗೆ, 2 ಲಕ್ಷಕ್ಕೂ ಅಧಿಕ ಹೇಳಿಕೆಗಳನ್ನು delete ಮಾಡಿದೆ ಎಂದು ಸರಕಾರಿ ಸ್ವಾಮ್ಯದ ಸುದ್ದಿಸಂಸ್ಥೆ ವರದಿ ಮಾಡಿದೆ.
ರಾಜಕೀಯ ಅಸ್ಥಿರತೆ ತಲೆದೋರುವ ಭೀತಿ ಎದುರಾಗಿರುವುದರಿಂದ ಚೀನಾದ ಅಧಿಕಾರಿಗಳು ಸೂಕ್ಷ್ಮ ಮಾಹಿತಿಗಳನ್ನು ಸೆನ್ಸಾರ್ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಹಿಂದಿನ ತಿಂಗಳು ರಾಜಕೀಯ ನಾಯಕರನ್ನು ಟೀಕಿಸಿ, ಅಸಂಗತ ರಾಜಕೀಯ ಅಭಿಪ್ರಾಯಗಳನ್ನು ಪ್ರಕಟಿಸಿದ್ದಕ್ಕೆ ಈ ವೆಬ್ಸೈಟ್ಗಳನ್ನು ಮುಚ್ಚಲಾಗಿದೆ. ಸೇನಾ ದಂಗೆಯ ವದಂತಿಗಳನ್ನು ಮಟ್ಟ ಹಾಕುವ ಸಲುವಾಗಿಯೂ ಸರಕಾರ ವೆಬ್ಸೈಟ್ಗಳ ವಿರುದ್ಧ ಈ ಕಠಿಣ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ಉನ್ನತ ರಾಜಕೀಯ ನಾಯಕರೊಬ್ಬರು ಮರಳಿ ಮುಖ್ಯವಾಹಿನಿಗೆ ಬರಲು ಯತ್ನಿಸುತ್ತಿರುವ ವದಂತಿಗಳಿಗೆ ಕಡಿವಾಣ ಹಾಕುವ ಸಲುವಾಗಿ ಚೀನಾದ ಅಧಿಕಾರಿಗಳು ಒಂದೇ ಸಮನೆ ವೆಬ್ಸೈಟ್ಗಳನ್ನು ಕಿತ್ತು ಹಾಕಿದ್ದಾರೆ. ಹೇಳಿಕೆಗಳನ್ನು ಅಳಿಸಿ ಹಾಕಿದ್ದಾರೆ ಎಂದು ಸರಕಾರಿ ಸುದ್ದಿಸಂಸ್ಥೆ ಕ್ಸಿನ್ಹುವಾ ಮೂರು ಸಾಲಿನ ಹೇಳಿಕೆಯಲ್ಲಿ ತಿಳಿಸಿದೆ. ಈ ರಾಜಕೀಯ ನಾಯಕನ ಪತ್ನಿ ಬ್ರಿಟಿಷ್ ಉದ್ಯಮಿಯೊಬ್ಬರನ್ನು ಸಾಯಿಸಿದ್ದಾರೆ ಎಂಬ ಆರೋಪವಿದೆ. ಆದ್ದರಿಂದ ಅವರನ್ನು ಹುದ್ದೆಯಿಂದ ಕಿತ್ತು ಹಾಕಲಾಗಿದೆ.
ಇದು ಕಮ್ಯುನಿಸ್ಟ್ ಪಾರ್ಟಿಯ ಕಾರ್ಯದರ್ಶಿ ಹುದ್ದೆಯಿಂದ ಕಳೆದ ತಿಂಗಳು ಉಚ್ಚಾಟಿತರಾಗಿರುವ ಜನಪ್ರಿಯ ನಾಯಕ ಬೊ ಕ್ಸಿಲಾಯಿ ಕುರಿತು ಈ ಹೇಳಿಕೆ ಎಂದು ಮೂಲಗಳು ಹೇಳಿವೆ. ಚೀನಾದಲ್ಲಿ ಅಪಾರ ಜನಪ್ರಿಯತೆ ಪಡೆದುಕೊಂಡಿರುವ ಟ್ವಿಟ್ಟರ್ ಮಾದರಿಯ ಬ್ಲಾಗಿಂಗ್ ಸೈಟ್ ವಿಬೊಸ್ (webOS), 25 ಸದಸ್ಯರ ಪಾಲಿಟ್ ಬ್ಯೂರೊದಿಂದ ಬೊ ಕ್ಸಿಲಾಯಿ ಅವರನ್ನು ಅಮಾನತುಗೊಳಿಸಿರುವುದು ಹಾಗೂ ಅವರ ಪತ್ನಿಯ ವಿರುದ್ಧ ಕೊಲೆ ತನಿಖೆ ನಡೆಯುತ್ತಿರುವುದರ ಬಗ್ಗೆ ಅನೇಕ ವದಂತಿಗಳನ್ನು ಪ್ರಕಟಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications