ಮೌಲ್ಯಮಾಪನ ಗೊಂದಲ : ಸಿಇಟಿ ಪರೀಕ್ಷೆ ಮುಂದೂಡಿಕೆ

ಈ ಕುರಿತು ಒನ್ಇಂಡಿಯಾ ಕನ್ನಡದೊಡನೆ ಮಾತನಾಡಿದ ಕರ್ನಾಟಕ ಪರೀಕ್ಷಾ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕಿ ರಶ್ಮಿ ವಿ. ಮಹೇಶ್ ಅವರು, ಮೊದಲು ದ್ವಿತೀಯ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಬಯಲಾದವು, ನಂತರ ಶಿಕ್ಷಕರಿಂದ ಮೌಲ್ಯಮಾಪನವನ್ನು ಬಹಿಷ್ಕರಿಸಲಾಯಿತು. ಈ ಎಲ್ಲ ಘಟನೆಗಳ ಪರಿಣಾಮ ಸಿಇಟಿ ಮೇಲೂ ಆಯಿತು ಎಂದು ತಿಳಿಸಿದರು.
ಸಿಇಟಿ ಪರೀಕ್ಷೆಗಳು ಮುಗಿದು ಹತ್ತು ದಿನದೊಳಗೆ, ಅಂದರೆ ಜೂನ್ ಮೊದಲ ವಾರದಲ್ಲಿ ಸಿಇಟಿ ಫಲಿತಾಂಶ ಹೊರಬೀಳಲಿದೆ ಎಂದು ರಶ್ಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮೇ ಎರಡನೇ ವಾರದಲ್ಲಿ ಹೊರಬೀಳುವ ಸಂಭವನೀಯತೆಯಿದೆ. [ದ್ವಿತೀಯ ಪಿಯುಸಿ ಫಲಿತಾಂಶ ಒನ್ಇಂಡಿಯಾ-ಕನ್ನಡದಲ್ಲಿ ಪ್ರಕಟವಾಗಲಿದೆ, ನಿರೀಕ್ಷಿಸಿ.]
ಈ ಮೊದಲು ಸಿಇಟಿಯನ್ನು ಮೇ 3 ಮತ್ತು 4ರಂದು ನಿಗದಿಪಡಿಸಲಾಗಿತ್ತು. ಮೇ 3, ಗುರುವಾರ ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆಗಳಿದ್ದವು. ಮೇ 4, ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಬೇಕಿದ್ದವು. ಹೊರನಾಡ ವಿದ್ಯಾರ್ಥಿಗಳಿಗೆ ಮತ್ತು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆಯನ್ನು ಮೇ 5, ಶನಿವಾರ ನಿಗದಿಪಡಿಸಲಾಗಿತ್ತು.
ದ್ವಿತೀಯ ಪರೀಕ್ಷೆ ಮೌಲ್ಯಮಾಪನ ಏ. 17ರಿಂದ ಮತ್ತೆ ಆರಂಭವಾಗಿದ್ದು, ಮೇ ಎರಡನೇ ವಾರದಲ್ಲಿ ಫಲಿತಾಂಶ ಹೊರಬೀಳುವ ಸಂಭವನೀಯತೆಯಿದೆ. ನಿಗದಿತ ಸಮಯದಲ್ಲಿ ಮೌಲ್ಯಮಾಪನ ಮುಗಿದಿದ್ದರೆ ಏ.19ರೊಳಗಾಗಿ ಮೌಲ್ಯಮಾಪನ ಮುಕ್ತಾಯವಾಗಬೇಕಿತ್ತು. ಆದರೆ, ಹೆಚ್ಚಿನ ವೇತನ ಆಗ್ರಹಿಸಿ ಉಪನ್ಯಾಸಕರು ಮೌಲ್ಯಮಾಪನವನ್ನು ಬಹಿಷ್ಕರಿಸಿದ್ದರು. ನಂತರ ಏ.16ರ ಸಂಜೆ ಬರಿಷ್ಕಾರ ಹಿಂತೆಗೆದುಕೊಂಡರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications