ಬಿಇಎಂಎಲ್ ಮುಖ್ಯಸ್ಥ ನಟರಾಜನ್ ಮೇಲೆ FIR

ನಟರಾಜನ್ ಅವರ ಮನೆ ಹಾಗೂ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು ಹಾಗೂ ಕೊಯಮತ್ತೂರು ನಿವಾಸ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಅನೇಕ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೇನಾ ಟ್ರಕ್ ಖರೀದಿ ವೇಳೆ ತಮಗೆ ಲಂಚ ಒಡ್ಡಲಾಗಿತ್ತು ಎಂದು ಭೂ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್ ಅವರು ಆರೋಪ ಮಾಡಿದ್ದರು. ನಂತರ ಕೇಂದ್ರ ಸರ್ಕಾರ ಈ ಕುರಿತು ತನಿಖೆ ನಡೆಸುವಂತೆ ಕೇಂದ್ರ ತನಿಖಾ ಏಜೆನ್ಸಿ(CBI)ಗೆ ಆದೇಶಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ವೆಕ್ಟ್ರಾ ಅಧ್ಯಕ್ಷ ರವೀಂದರ್ ರಿಷಿ ಹಾಗೂ ಬಿಇಎಂಎಲ್ ಮಾಜಿ ನಿರ್ದೇಶಕ(ರಕ್ಷಣಾ ಸರಬರಾಜು) ವಿ ಮೋಹನ್ ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಒಳಪಡಿಸಿತ್ತು.
ಆರೋಪವೇನು?: ಭಾರತೀಯ ಮೂಲದ ಕಂಪನಿ ಕನ್ಸಲ್ಟೆನ್ಸಿ ಕಂಪನಿ Astral ಮೂಲಕ ಟಟ್ರಾ ಕಂಪನಿ ಟ್ರಕ್ ಗಳನ್ನು ಖರೀದಿಸಲು ಬಿಇಎಂಎಲ್ ಕರೆದಿದ್ದ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ. ತಾಂತ್ರಿಕ ಸಲಹೆ, ಸೂಚನೆ ನೀಡುವ ಬದಲು ಹೆಚ್ಚಿನ ಬೆಲೆ ನಿಗದಿಪಡಿಸಿ, ಕಡಿಮೆ ಬೆಲೆಗೆ ಕಳಪೆ ಟ್ರಕ್ ಗಳನ್ನು ಬೇನಾಮಿ ಕಂಪನಿಗಳಿಂದ ತರೆಸಿಕೊಳ್ಳುವ ಹುನ್ನಾರ ನಡೆದಿತ್ತು ಎಂಬ ಆರೋಪಗಳಿದೆ.
ಈ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಸಿಂಗ್ ಅವರು ಖರೀದಿಗೆ ಅನುಮತಿ ನೀಡಿರಲಿಲ್ಲ. ಸೇನಾ ಮುಖ್ಯಸ್ಥರ ಮನವೊಲಿಸಲು ಲಂಚದ ಆಮಿಷ ಒಡ್ಡಲಾಗಿತ್ತು. ಈ ಬಗ್ಗೆ ವಿಕೆ ಸಿಂಗ್ ಲಿಖಿತ ದೂರು ನೀಡಿದ ಮೇಲೆ ಸಿಬಿಐ ತನ್ನ ತನಿಖೆ ತೀವ್ರಗೊಳಿಸಿದೆ.
ಸಿಬಿಐನ ನಾಲ್ಕು ಅಧಿಕಾರಿಗಳು ಇಂದಿರಾನಗರದ ನಟರಾಜನ್ ಅವರ ಮನೆಯ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ಸಂಗ್ರಹಿಸಿದೆ. ನಟರಾಜನ್ ಅವರನ್ನು ಒಂದು ಸುತ್ತಿನ ವಿಚಾರಣೆಗೆ ಒಳಪಡಿಸಲಾಗಿತ್ತು. ಅಗತ್ಯ ಬಿದ್ದರೆ ಬಂಧಿಸಿ ವಿಚಾರಣೆಗೆ ಒಳಪಡಿಸಬಹುದಾಗಿದೆ ಎಂದು ಸಿಬಿಐ ಮೂಲಗಳು ಹೇಳಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications