ಮಲ್ಲೇಶ್ವರ ಮಾರುಕಟ್ಟೆ ಧ್ವಂಸ ಯಾರು ಹೊಣೆ?

ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿ, ಸಂಚಾರ ದಟ್ಟನೆ ಅಧಿಕವಾಗಿರುವ ಸಂಪಿಗೆ ರಸ್ತೆಯಲ್ಲಿ ಎರಡು ಗಂಟೆಗೂ ಅಧಿಕ ಕಾಲ ರಸ್ತೆ ತಡೆ ನಡೆನಡೆಸಿ ಪ್ರತಿಭಟನೆ ಮಾಡಲಾಯಿತು.
ಪೊಲೀಸರು ಹಾಗೂ ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಂದರ್ಭದಲ್ಲಿ ಸ್ಥಳದಲ್ಲೆ ಕೆಲ ಸಮಯ ತೀವ್ರ ಉದ್ವಿಗ್ನ ಸ್ಥಿತಿ ಕೂಡ ನಿರ್ಮಾಣ ವಾಗಿತ್ತು.
ನಮ್ಮದೇನು ತಪ್ಪಿಲ್ಲ: ಬಿಬಿಎಂಪಿ, ವ್ಯಾಪಾರಿಗಳಿಗೆ ಯಾವುದೇ ಮುನ್ನೆಚ್ಚರಿಕೆ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದು, ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎಂದು ವ್ಯಾಪಾರಿಗಳು ಮಾಡಿರುವ ಆರೋಪವನ್ನು ಅಧಿಕಾರಿಗಳು ತಳ್ಳಿ ಹಾಕಿದ್ದಾರೆ.
ಕೆಲವು ವ್ಯಾಪಾರಿಗಳಿಗೆ ಗುರುವಾರ ನೋಟಿಸ್ ನೀಡಿದ್ದು ನಿಜ. ಆದರೆ, ಮೂರು ತಿಂಗಳ ಹಿಂದೆಯೇ ಅಕ್ರಮ ಒತ್ತುವತಿ ತೆರವುಗೊಳಿಸುವಂತೆ ಸೂಚಿಸಲಾಗಿತ್ತು ಎಂದು ಅಧಿಕಾರಿಗಳು 60ಕ್ಕೂ ಅಧಿಕ ಅಂಗಡಿಯ ಭಾಗಗಳನ್ನು ಧ್ವಂಸಗೊಳಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
9 ವರ್ಷಗಳಿಂದ ಒತ್ತುವರಿಯ ಬಗ್ಗೆ ಚಕಾರವೆತ್ತದ ಅಧಿಕಾರಿಗಳು, ಪಾದಚಾರಿ ಗಳು ಮತ್ತು ಸಾರ್ವಜನಿಕರು ಓಡಾಡಲು ಸ್ಥಳವಿಲ್ಲ ಎಂದು ಹೇಳುತ್ತಿದ್ದಾರೆ. ನಾನು 30-35 ಸಾವಿರ ಸಾಲ ಮಾಡಿ ಇಲ್ಲಿ ಅಂಗಡಿ ಇಟ್ಟಿದ್ದೇನೆ ಈಗ ಎಲ್ಲಾ ನಾಶವಾಗಿದೆ ಏನು ಮಾಡಲಿ ಎಂದು ಜಯಮ್ಮ ಗೋಳಿಡುತ್ತಿದ್ದಾರೆ.
ಅಗತ್ಯ ಸೌಲಭ್ಯ ಕೊರತೆ: ಮಾರುಕಟ್ಟೆಯಲ್ಲಿ ಅಗತ್ಯ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕವಿಲ್ಲ. ಕಟ್ಟಡ ಕೂಡ ಶಿಥಿಲಗೊಂಡಿದೆ. ಮಳೆ ಬಂದರೆ ಮಾರುಕಟೆ ನೀರಿನಿಂದ ತುಂಬಿಕೊಳ್ಳು ತ್ತದೆ. ಆದರೆ, ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳದ ಅಧಿಕಾರಿಗಳು ಏಕಾಏಕಿ ಒತ್ತುವರಿ ತೆರವಿಗೆ ಮುಂದಾಗಿರುವುದು ಏಕೆ ಎಂದು ಸ್ಥಳೀಯರು ಕೂಡಾ ಪ್ರಶ್ನಿಸಿದ್ದಾರೆ.
ಒತ್ತುವರಿ ತೆರವಿಗೆ ಸಂಬಂಧಿಸಿ ದಂತೆ ಅಧಿಕಾರಿಗಳು, ಮಲ್ಲೇಶ್ವರಂ ಮಾರುಕಟ್ಟೆಯಲ್ಲಿ ಸೂಕ್ತ ನಿಲ್ದಾಣ ವ್ಯವಸ್ಥೆ ಇಲ್ಲ. ಸಾರ್ವಜನಿಕರು ವ್ಯಾಪಾರಕ್ಕೆ ಬಂದ ತೊಂದರೆಯಾಗುತ್ತಿದ್ದು, ಮಾರುಕಟ್ಟೆಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಅಕ್ರಮ ಮಳಿಗೆಗಳ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications