ರೇಣುಕಾಚಾರ್ಯಗೆ ಕ್ಲೀನ್ಚಿಟ್ ಇಲ್ಲ: ನ್ಯಾ ಸುಧೀಂದ್ರ

ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿರುವ ಬಗ್ಗೆ ಆಕ್ಷೇಪಣೆ ಸಲ್ಲಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾ ಎನ್ ಕೆ ಸುಧೀಂದ್ರ ರಾವ್ ಅವರು ಅಬಕಾರಿ ಇಲಾಖೆಯ ಉಪ ಆಯುಕ್ತ, ದೂರುದಾರ ಮೋಹನ್ ಕುಮಾರ್ ಅವರಿಗೆ ಸೂಚಿಸಿದ್ದಾರೆ.
ಮಾರ್ಚ್ 21ರಂದು ಬೆಂಗಳೂರಿನ ಜೆಸಿ ನಗರದಲ್ಲಿರುವ ಮೋಹನ್ ಕುಮಾರ್ ಕಚೇರಿಯ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ ಸಂದರ್ಭದಲ್ಲಿ 4.5 ಲೀಟರ್ ವಿದೇಶಿ ಮದ್ಯ ಸೇರಿದಂತೆ 24 ಲೀಟರ್ನಷ್ಟು ಅಕ್ರಮ ಮದ್ಯ ಹಾಗೂ ನಗದು ಪತ್ತೆಯಾಗಿತ್ತು.
ಈ ಬಗ್ಗೆ ಲೋಕಾಯುಕ್ತ ನ್ಯಾಯಾಲಯ ಮೋಹನ್ ಕುಮಾರ್ರನ್ನು ವಿಚಾರಣೆಗೊಳಪಡಿಸಿತ್ತು. ವಿಚಾರಣೆ ವೇಳೆ ಮದ್ಯವನ್ನು ಅಬಕಾರಿ ಸಚಿವ ರೇಣುಕಾಚಾರ್ಯ ಸೂಚನೆ ಮೇರೆಗೆ ಸಂಗ್ರಹಿಸಿಡಲಾಗಿತ್ತು. ಅದನ್ನು ಗೋಲ್ಡನ್ ಫಾಮ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಲಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಅವರ ಬೆಂಬಲಿಗರಿಗೆ ನೀಡುವುದಕ್ಕಾಗಿಯೇ ಸಂಗ್ರಹಿಸಡಲಾಗಿತ್ತು ಎಂದು ಮೋಹನ್ ಕುಮಾರ್ ಅವರು ನ್ಯಾ. ಎನ್.ಕೆ. ಸುಧೀಂದ್ರ ರಾವ್ ಮುಂದೆ ಅವರ ನಿವಾಸದಲ್ಲಿ ಹಾಜರುಪಡಿಸಿದಾಗ ಹೇಳಿಕೆ ನೀಡಿದ್ದರು.
ದಾಳಿ ವೇಳೆ, 25 ಸಾವಿರ ನಗದು ಮತ್ತು ವಿದೇಶಿ ಬ್ರ್ಯಾಂಡ್ಗಳ ಮದ್ಯದ ಬಾಟಲಿ ಸೇರಿದಂತೆ 20ಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ನ್ಯಾಯಾಲಯ ಅಬಕಾರಿ ಸಚಿವ ರೇಣುಕಾಚಾರ್ಯ ವಿರುದ್ಧ ತನಿಖೆ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಸೂಚಿಸಿತ್ತು.
ಲೋಕಾಯುಕ್ತ ಕೊರ್ಟ್ಗೆ ಮಾರ್ಚ್ 31ರಂದು ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿ, ಸಚಿವರು ಮೋಹನ್ ಕುಮಾರ್ಗೆ ಎರಡು ಬಾರಿ ಕರೆ ಮಾಡಿ ಬಜೆಟ್ ಕುರಿತು ಚರ್ಚೆ ನಡೆಸಿದ್ದಾರೆ. ಆದರೆ ಮಧ್ಯ ಸರಬರಾಜು ಮಾಡು ಎಂದೇನೂ ಹೇಳಿಲ್ಲವೆಂದು ಕೋರ್ಟಿಗೆ ತಿಳಿಸಿದ್ದರು. ಇದರೊಂದಿಗೆ ಪ್ರಕರಣದಲ್ಲಿ ರೇಣುಕಾಚಾರ್ಯ ಆರೋಪ ಮುಕ್ತರಾಗಿದ್ದರು. ಆದರೆ ಈಗ ಮತ್ತೆ ...
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications