ಕೆಆರ್ ಪುರಂನಲ್ಲಿ ಟೆಕ್ಕಿಯ ಪತ್ನಿ ಆತ್ಮಹತ್ಯೆ

kr-puram-techie-wife-shravanthi-vishnuvardhan-suicide
ಬೆಂಗಳೂರು, ಏ. 25: ಖಾಸಗಿ ಕಂಪನಿಯಲ್ಲಿ ಎಂಜಿನಿಯರೊಬ್ಬರ ಪತ್ನಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರ ಸಮೀಪದ ಗಾಯಿತ್ರಿ ಲೇಔಟ್‌ನಲ್ಲಿ ಸೋಮವಾರ ಸಂಜೆ ನಡೆದಿದೆ. ವಿಷ್ಣುವರ್ಧನ ಎಂಬುವರ ಪತ್ನಿ ಶ್ರವಂತಿ (28) ಆತ್ಮಹತ್ಯೆ ಮಾಡಿಕೊಂಡವರು. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡು ವಿಷ್ಣುವರ್ಧನ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಷ ಸೇವಿಸಿದ್ದ ಶ್ರವಂತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶ್ರವಂತಿ ಮಂಗಳವಾರ ಸಾವನ್ನಪ್ಪಿದರು ಎಂದು ಕೆ.ಆರ್.ಪುರ ಪೊಲೀಸರು ತಿಳಿಸಿದ್ದಾರೆ. ಶ್ರವಂತಿ ಬಿಕಾಂ ಓದಿದ್ದರು. ಇವರ ಮದುವೆಯಾಗಿ ನಾಲ್ಕು ವರ್ಷವಾಗಿತ್ತು. ದಂಪತಿಗೆ ಹರ್ಷವರ್ಧನ ಎಂಬ 11 ತಿಂಗಳ ಮಗುವಿದೆ.

ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದ ವಿಷ್ಣುವರ್ಧನ ಅವರು ತವರು ಮನೆಯಿಂದ ಹಣ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ಅವರು, ಪತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

'ಅಳಿಯ ಮತ್ತು ಆತನ ಪೋಷಕರು ವರದಕ್ಷಿಣೆ ಹಣಕ್ಕಾಗಿ ಮಗಳಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿಗೆ ಅಳಿಯ ಮತ್ತು ಆತನ ಕುಟುಂಬ ಸದಸ್ಯರೇ ಕಾರಣ' ಎಂದು ಶ್ರವಂತಿ ತಂದೆ ದಳಪತಿ ಅವರು ದೂರು ಕೊಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+