SSLC: ಶಿಕ್ಷಕ ಶಿವರಾಮು ಹೃದಯಾಘಾತಕ್ಕೆ ಬಲಿ

ಏಪ್ರಿಲ್ 19ರಂದು ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಬೆಂಗಳೂರಿಗೆ ಆಗಮಿಸಿದ್ದ ಗೌರಿಬಿದನೂರಿನ ಸರಕಾರಿ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ಅಶ್ವತ್ಥ ರೆಡ್ಡಿ (52) ಅವರು ಹೃದಯಾಘಾತದಿಂದ ಅಸುನೀಗಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಆ ಸಂದರ್ಭದಲ್ಲಿ 50 ವರ್ದ ದಾಟಿದವರಿಗೆ ಮೌಲ್ಯಮಾಪನ ಕಾರ್ಯಭಾರ ಕಡ್ಡಾಯಗೊಳಿಸುವುದನ್ನು ನಿಲ್ಲಿಸಬೇಕು ಎಂಬ ಮಾತುಗಳು ಕೇಳಿಬಂದಿದ್ದವು.
ನಗರದ ಲಕ್ಷ್ಮೀ ಜನಾರ್ದನ ಶಾಲೆಯಲ್ಲಿ SSLC ಪರೀಕ್ಷೆಯ ಸಮಾಜ ಉತ್ತರ ಪತ್ರಿಕೆಯನ್ನು ಶಿವರಾಮು ವೌಲ್ಯಮಾಪನ ಮಾಡುತ್ತಿದ್ದಾಗ ಮಧ್ಯಾಹ್ನ 12ರ ಸಮಯದಲ್ಲಿ ಹಠಾತ್ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು.
ಕೂಡಲೇ ಅವರನ್ನು ಹತ್ತಿರದ ವಿಕ್ರಂ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಶವಪರೀಕ್ಷೆ ನಂತರ ಪಾಂಡವಪುರಕ್ಕೆ ರವಾನಿಸಲಾಯಿತು ಎಂದು ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಎಚ್.ಬಿ. ನಾಗೇಂದ್ರರಾವ್ ತಿಳಿಸಿದ್ದಾರೆ.












Click it and Unblock the Notifications