Get Updates
Get notified of breaking news, exclusive insights, and must-see stories!

AICC ಅಧ್ಯಕ್ಷೆ ಸೋನಿಯಾ ರಾಜ್ಯದಲ್ಲಿ 2 ದಿನ

ಬೆಂಗಳೂರು, ಏ.27: ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರ ವೀಕ್ಷೆಣೆ ಮತ್ತು ತುಮಕೂರಿನ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯವರ 105ನೆ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಪ್ರಕಾರ ಸೋನಿಯಾ ಮೇಡಂ ಭೇಟಿ ವಿವರ ಹೀಗಿದೆ:

* ಏ. 27ರಂದು ರಾತ್ರಿ 9 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದು, ರಾಜಭವನದಲ್ಲಿ ವಾಸ್ತವ್ಯ.
* ಏ. 28ರಂದು ಬೆಳಗ್ಗೆ 8:30ಕ್ಕೆ ಹೆಲಿಕಾಪ್ಟರಿನಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ನಾಗಸಮುದ್ರ ಹಳ್ಳಿಗೆ ಪ್ರಯಾಣ.
* ನಾಗಸಮುದ್ರ ಹಳ್ಳಿಯಲ್ಲಿ ಬರ ಕಾಮಗಾರಿ ಪರಿಶೀಲನೆ.
* ನಾಗಸಮುದ್ರದಲ್ಲಿ ಕೆರೆಗಳ ವೀಕ್ಷಣೆ, ಗ್ರಾಮಸ್ಥರೊಂದಿಗೆ ಮಾತುಕತೆ.

ಚಿತ್ರದುರ್ಗದಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಆಗಮನ.
* ಏ. 28ರಂದು ಬೆಳಗ್ಗೆ 11 ಗಂಟೆಗೆ ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಗುರುವಂದನಾ ಕಾರ್ಯಕ್ರಮ ಉದ್ಘಾಟನೆ.
* ತುಮಕೂರಿನ ಬಿರ್ಲಾ ಅಡಿಟೋರಿಯಂನಲ್ಲಿ ಕೆಪಿಸಿಸಿ ಸರ್ವ ಸದಸ್ಯರ ಸಭೆ.
* ಸಭೆಯಲ್ಲಿ ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಕೆಪಿಸಿಸಿ ಪ್ರವಾಸ ನಡೆಸಿ ತಯಾರಿಸಿದ ವರದಿ ಸಲ್ಲಿಕೆ.
* ಕೆಪಿಸಿಸಿ ಸಭೆಯ ಬಳಿಕ ಬೆಂಗಳೂರಿಗೆ ವಾಪಸ್, ಅಲ್ಲಿಂದ ಮುಂದಕ್ಕೆ ದೆಹಲಿಗೆ ಪ್ರಯಾಣ.

ರಾಜಕೀಯ ಬಣ್ಣ ಬೇಡ: ಸೋನಿಯಾ ಗಾಂಧಿಯ ಕರ್ನಾಟಕ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಪ್ರಚಾರದ ಗಿಮಿಕ್ಕೂ ಅಲ್ಲ, ಕಾರ್ಯಕ್ರಮಕ್ಕೆ ರಾಜಕೀಯದ ಲೇಪ ನೀಡುವುದು ಬೇಡ ಎಂದು ಪರಮೇಶ್ವರ್ ವಿನಂತಿಸಿರುವ ಬೆನ್ನಲ್ಲೇ ...

ಯಾವುದೇ ಸಭಾ ಆಭಾಸ ಆಗುವುದು ಬೇಡವೆಂದು ಸಿದ್ದಗಂಗಾ ಮಠದಲ್ಲಿ ನಡೆಯುವ ಕಾರ್ಯಕ್ರದಲ್ಲಿ ವೇದಿಕೆಯ ಮೇಲೆ ಯಾವುದೇ ರಾಜಕಾರಣಿಗೆ ಸ್ಥಾನ ಕಲ್ಪಿಸಲಾಗಿಲ್ಲ, except Soniaji. ಗಮನಾರ್ಹವೆಂದರೆ, ಇದೇ ಮೊದಲ ಬಾರಿಗೆ ರಾಜಕೀಯ ನಾಯಕರ ಹೊರತಾಗಿ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+