ಬಿದರಿ ಕೇಸ್: ಮಾಧ್ಯಮಗಳಿಗೆ ಕೋರ್ಟ್ ನಿಂದನೆ ನೋಟಿಸ್

ರಾಜ್ಯ ಐಜಿ ಡಿಜಿಪಿಯಾಗಿ ಶಂಕರ ಬಿದರಿ ಅವರನ್ನು ನೇಮಕ ಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿ ಹೈಕೋರ್ಟ್ ತೀರ್ಪು ನೀಡಿತ್ತು. ಕೋರ್ಟ್ ತೀರ್ಪಿನ ಬಗ್ಗೆ ಅವಹೇಳನಕಾರಿ ಟೀಕೆ ಮಾಡಿರುವ ಆರೋಪದ ಮೇಲೆ 3 ಪತ್ರಿಕೆಗಳಿಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.
'ಟೈಮ್ಸ್ ಆಫ್ ಇಂಡಿಯಾ'ದ ವ್ಯವಸ್ಥಾಪಕ ನಿರ್ದೇಶಕ ವಿನೀತ್ ಜೈನ್, 'ಹಿಂದುಸ್ತಾನ್ ಟೈಮ್ಸ್ 'ನ ಅಧ್ಯಕ್ಷೆ ಶೋಭನಾ ಭಾರ್ತಿ, 'ಕನ್ನಡಪ್ರಭ' ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ವರದಿಗಾರ ಪ್ರತಾಪ ಸಿಂಹ ಅವರ ವಿರುದ್ಧ ನರೇಂದ್ರ ಡಿ.ವಿ. ಗೌಡ ಹಾಗೂ ಇತರರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಆರೋಪ ಹೊರೆಸಿ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.
'ಕನ್ನಡಪ್ರಭ' ಪತ್ರಿಕೆಯಲ್ಲಿ ತೀರ್ಪಿನ ವಿರುದ್ಧ ಅವಹೇಳನಕಾರಿ ಟೀಕೆ ಮಾಡಲಾಗಿದೆ. ಉಳಿದ ಎರಡು ಪತ್ರಿಕೆಗಳು ತಮ್ಮ ವೆಬ್ಸೈಟ್ನಲ್ಲಿ ತೀರ್ಪಿನ ವಿರುದ್ಧ ಹೇಳಿಕೆ ನೀಡಿ, ಸಾರ್ವಜನಿಕರಿಂದ ಪ್ರತಿಕ್ರಿಯೆಗೆ ಆಹ್ವಾನಿಸಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
'ಕೋರ್ಟ್ ತೀರ್ಪಿನ ಪ್ರತಿ ಸಿಗುವ ಮುನ್ನವೇ, ನ್ಯಾಯಾಂಗದ ಬಗ್ಗೆ ತಪ್ಪು ಕಲ್ಪನೆ ಮೂಡಿಸುವಂತಹ ಸುದ್ದಿ ಪ್ರಕಟವಾಗಿದೆ. ನ್ಯಾಯಾಂಗಕ್ಕಿಂತ ತಮಗೇ ಎಲ್ಲವೂ ಗೊತ್ತು, ತಾವು ಸಮಾಜ ಸುಧಾಕರು ಎಂಬಂತೆ ಕನ್ನಡಪ್ರಭ ಪತ್ರಿಕೆಯು ಮುಖಪುಟದಲ್ಲಿಯೇ ಸುದ್ದಿ ಪ್ರಕಟಿಸಿದೆ' ಎಂದು ಅರ್ಜಿದಾರರು ದೂರಿದ್ದಾರೆ.
'ನರಹಂತಕ ವೀರಪ್ಪನ್ ಕಾರ್ಯಾಚರಣೆ ವೇಳೆ ನಾನು ಗಡಾಫಿ ಅಥವಾ ಸದ್ದಾಂ ಹುಸೇನ್ನಂತೆ ಸರ್ವಾಧಿಕಾರ ಮೆರೆದಿಲ್ಲ' ಎಂದು ಹೈಕೋರ್ಟಿಗೆ ಶಂಕರ ಬಿದರಿ ಪ್ರಮಾಣ ಪತ್ರ ಸಲ್ಲಿಸಿದ್ದರು.
ವೀರಪ್ಪನ್ ಕಾರ್ಯಾಚರಣೆ ವೇಳೆ ಅಮಾಯಕ ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಅನಾಹುತಗಳನ್ನು ಮನಗಂಡ ನ್ಯಾಯಮೂರ್ತಿಗಳು, ತಮ್ಮ ತೀರ್ಪಿನಲ್ಲಿ 'ಇವೆಲ್ಲ ನಿಜವೇ ಆಗಿದ್ದರೆ ಬಿದರಿ ಅವರು ಗಡಾಫಿ, ಸದ್ದಾಂಗಿಂತ ಕಡೆ' ಎಂದಿದ್ದರು. ಆದರೆ ಪ್ರಮಾಣ ಪತ್ರದ ವಿಷಯ ಪ್ರಸ್ತಾಪಿಸದೆಯೇ ನ್ಯಾಯಮೂರ್ತಿಗಳೇ ಖುದ್ದಾಗಿ ಈ ರೀತಿ ಹೇಳಿದ್ದಾರೆ ಎಂಬಂತೆ ಅರ್ಥ ಕಲ್ಪಿಸಿ ಪತ್ರಿಕೆಗಳು ಸುದ್ದಿ ಪ್ರಕಟಿಸಿರುವುದು ಸರಿಯಲ್ಲ ಎಂದು ಆರೋಪಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications