ಲಿಂಗಾಯತ ಮತ 'ಕೈ'ವಶಕ್ಕೆ ಸೋನಿಯಾ 'ಶ್ರೀ'ಕಾರ

ಶನಿವಾರ ಸಿದ್ದಗಂಗಾ ಮಠದಲ್ಲಿ ನಡೆಯುವ ಸಿದ್ಧಗಂಗಾ ಶ್ರೀಗಳ ಜಯಂತ್ಯುತ್ಸವದಲ್ಲಿ ಸೋನಿಯಾ ಪಾಲ್ಗೊಳ್ಳುತ್ತಿರುವುದು ಅತ್ಯಂತ ಮಹತ್ವದ್ದಾಗಿದೆ. ಕರ್ನಾಟಕದ ರಾಜಕೀಯದಲ್ಲಿ ಗಣನೀಯ ಪಾತ್ರವಹಿಸುವ ಲಿಂಗಾಯತ ಮತ ಬೇಟೆಗೆ ಅವರು ಶ್ರೀಕಾರ ಹಾಕಲಿದ್ದಾರೆ.
ಅತ್ತ ಲಿಂಗಾಯತರ ಅಧಿನಾಯಕ ಎಂದು ಮುದ್ರೆಯೊತ್ತಿರುವ ಯಡಿಯೂರಪ್ಪ ಅವರು ಏಕಾಂಗಿಯಾಗುತ್ತಿರುವ ಸಂದರ್ಭದಲ್ಲಿ ಸೋನಿಯಾ ಅವರ ಈ ನಡೆ ಕುತೂಹಲಕಾರಿಯಾಗಿದೆ. ಅದಕ್ಕೂ ಮುನ್ನ ಅನಾಮತ್ತಾಗಿ ಯಡಿಯೂರಪ್ಪ ಅವರನ್ನೇ ಪಕ್ಷದತ್ತ ಸೆಳೆದುಕೊಂಡರೆ ಹೇಗೆ ಎಂದು ಸೋನಿಯಾ ಪ್ರಯತ್ನಿಸಿದರಾದರೂ ರಾಜ್ಯ ಕಾಂಗ್ರೆಸ್ ಮಾತಿಗೆ ಮಣೆ ಹಾಕಿ, ತಮ್ಮತ್ತ ಸುಳಿದಾಡಲು ಹವಣಿಸಿದ ಯಡಿಯೂರಪ್ಪ ಅವರನ್ನು ದೂರವಿಟ್ಟರು.
ಅದರ ಬದಲಿಗೆ 'ಕಳಂಕಿತ ಯಡಿಯೂರಪ್ಪ ಅವರನ್ನು 'ಕೈ'ಬಿಟ್ಟು ನಮ್ಮೂರಲ್ಲೇ ಇರುವ ಪ್ರಭಾವಿ ಮಠಕ್ಕೆ ನಡೆದುಬನ್ನಿ. ಮುಂದಿನದೆಲ್ಲ ನಾನು ನೋಡಿಕೊಳ್ಳುತ್ತೇನೆ' ಎಂದು ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ ಅವರು ಹೇಳಿದ್ದೇ ತಡ ಸೋನಿಯಾ ಮೇಡಂ Yes ಎಂದು ಡಾ. ಶಿವಕುಮಾರ ಸ್ವಾಮಿಗಳತ್ತ 'ಹಸ್ತ'ಚಾಚಿದ್ದಾರೆ.
ಇದರಿಂದ ಧನ-ಜನ-ಮತ-ಬಲ ಹೊಂದಿರುವ ವೀರಶೈವ ಮಠಗಳ ಅಂಗಳದಲ್ಲಿ ಕೈ ಕಲರವ ಕೇಳಿಬರಲಿದೆ. ದಾವಣಗೆರೆಯ ಧಣಿ ಶಾಮನೂರು ಶಿವಶಂಕರಪ್ಪ ಅವರಿಗೆ ಕಾಂಗ್ರೆಸ್ಸಿನಲ್ಲಿ ಮತ್ತೆ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆಯೂ ದೊರೆತಿದೆ. ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನರಿಗೆ ಈ ಬಾರಿ ಪ್ರಭಾವಿ ಸ್ಥಾನ ಕಲ್ಪಿಸುವುದಂತೂ ನಿಚ್ಚಳವಾಗಿದೆ.
ರಾಜ್ಯ ಕಾಂಗ್ರೆಸ್ಸೂ ಸಹ ಇದನ್ನೇ ಬಯಸುತ್ತಿದೆ. ಲಿಂಗಾಯತ ಸಮುದಾಯ ಕಾಂಗ್ರೆಸ್ಸಿನಿಂದ ವಿಮುಖಗೊಂಡು ಅನೇಕ ವರ್ಷಗಳೇ ಕಳೆದುಹೋಗಿವೆ. ರಾಜ್ಯದ ಏಳೂವರೆ ಕೋಟಿ ಜನರಲ್ಲಿ ಶೇ. 18 ರಷ್ಟು ಜನಸಂಖ್ಯೆಯನ್ನು ಹೊಂದಿರುವ ಸಮುದಾಯ ಬಿಜೆಪಿಯತ್ತ ವಾಲಿರುವುದನ್ನು ಮತ್ತೆ ತನ್ನತ್ತ ಸೆಳೆಯುವುದು ಕಾಂಗ್ರೆಸ್ ಸದ್ಯದ ಗುರಿಯಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications