ಸಚಿನ್ ತೆಂಡೂಲ್ಕರ್ ರಾಜಕೀಯ ಸೇರಬೇಕೆ?

ಸಚಿನ್ ಅವರ ನಾಮನಿರ್ದೇಶನವನ್ನು ಪಕ್ಷಭೇದ ಮರೆತು ಎಲ್ಲ ಪಕ್ಷಗಳು ಮುಕ್ತಕಂಠದಿಂದ ಸ್ವಾಗತಿಸಿವೆ. ಇದರ ಲಾಭ ಸಂಪೂರ್ಣ ಪಡೆಯಲು ಹವಣಿಸುತ್ತಿರುವ ಕಾಂಗ್ರೆಸ್ ಮಾತ್ರ, ಮತ್ತೆ ಬೋಫೋರ್ಸ್ ಭೂತವನ್ನು ಎಬ್ಬಿಸುತ್ತಿರುವ ವಿರೋಧ ಪಕ್ಷಗಳ ಗಮನವನ್ನು ಬೇರೆಡೆ ಸೆಳೆಯಲು ಈ ತಂತ್ರಗಾರಿಕೆ ಹೂಡುತ್ತಿದೆ ಎಂದು ದೂರಲಾಗುತ್ತಿದೆ.
ಭ್ರಷ್ಟಾಚಾರ ನಿಗ್ರಹಕ್ಕೆ ಕುರಿತಂತೆ ನಡೆದ ಚರ್ಚೆಯ ಸಂದರ್ಭದಲ್ಲಿ, ಬೋಫೋರ್ಸ್ ಲಂಚ ಹಗರಣ ಮುಚ್ಚಿದ ಕಾಂಗ್ರೆಸ್ ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬದ್ಧತೆಯನ್ನು ಬಿಜೆಪಿ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ. ಕ್ವಟ್ರೋಚ್ಚಿ ವಿರುದ್ಧ ಬಲವಾದ ಸಾಕ್ಷಿಗಳಿದ್ದರೂ ಕ್ಲೀನ್ ಚಿಟ್ ನೀಡಿದ್ದೇಕೆ ಎಂದು ಕೇಳಿದ್ದಾರೆ. ಈ ಹಗರಣವನ್ನು ಮುಚ್ಚಿಹಾಕಿದ ಸಿಬಿಐ ಅಧಿಕಾರಿಗಳ ವಿರುದ್ಧ ಕೂಡ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಸೋನಿಯಾ ಅವರ ಬೋಫೋರ್ಸ್ ಗುಡುಗು ಎದ್ದಿರುವ ಹಂತದಲ್ಲಿ ಸಚಿನ್ ತೆಂಡೂಲ್ಕರ್ ಅವರ ನಾಮನಿರ್ದೇಶನದ ಸಹಾಯಪಡೆದು, ವಿರೋಧ ಪಕ್ಷಗಳ ದಿಕ್ಕುತಪ್ಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಚಿನ್ ರನ್ನು ಸೆಳೆಯಲು ಕಾಂಗ್ರೆಸ್ ಯತ್ನಿಸುತ್ತಿರುವ ಹಂತದಲ್ಲಿ, ದಾಳವನ್ನು ಉರುಳಿಸಿರುವ ಮುಲಾಯಂ ಸಿಂಗ್, ಯಾವ ಪಕ್ಷ ಸೇರಬೇಕೆಂಬ ನಿರ್ಧಾರವನ್ನು ಸಚಿನ್ ಅವರಿಗೇ ಬಿಡಬೇಕು ಎಂದಿದ್ದಾರೆ.
ಸಚಿನ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮೊದಲು ಅವರಿಗೆ ದೇಶದ ಅತ್ಯಮತ್ತಮ ನಾಗರಿಕ ಗೌರವ 'ಭಾರತ ರತ್ನ' ನೀಡಬೇಕಾಗಿತ್ತು ಎಂಬ ಮಾತನ್ನು ಶಿವಸೇನೆ ಹೇಳಿದೆ. ಸಚಿನ್ ಅವರ ಆಯ್ಕೆಯಿಂದ ಯುವಜನತೆಗೆ ರಾಜಕೀಯ ಸೇರಲು ಪ್ರೋತ್ಸಾಹ ಸಿಗಲಿದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ರಾಜಕೀಯ ಲಾಭಕ್ಕಾಗಿ ತಮ್ಮ ಹೆಸರು ಬಳಸಲಾಗುತ್ತಿರುವುದಕ್ಕೆ ಸಚಿನ್ ತೆಂಡೂಲ್ಕರ್ ಏನು ಹೇಳುತ್ತಾರೆ? ಅಸಲಿಗೆ ಸಚಿನ್ ರಾಜಕೀಯ ಸೇರಬೇಕಾ?
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications