ಬೇಲೇಕೇರಿ ಸಿಬಿಐಗೆ , ಸಂತೋಷ್ ಹೆಗ್ಡೆ ಫುಲ್ ಖುಷ್

Santosh Hegde
ಬೆಂಗಳೂರು, ಏ.29: ಬೇಲಿಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸಿಇಸಿ ಶಿಫಾರಸು ಮಾಡಿರುವುದು ಒಂದು ಉತ್ತಮ ನಿರ್ಧಾರವಾಗಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಲೋಕಾಯುಕ್ತ ತನಿಖಾ ವರದಿಯಲ್ಲೂ ಇದೇ ರೀತಿ ಶಿಫಾರಸು ಮಾಡಲಾಗಿತ್ತು. ಎಫ್ ಐಆರ್ ಮಾತ್ರ ಸಾಲದು, ಹೆಚ್ಚಿನ ತನಿಖೆ ಅಗತ್ಯವಿದೆ ಎಂದು ಹೇಳಲಾಗಿತ್ತು ಎಂದರು.

ಬೃಹತ್ ಪ್ರಮಾಣದ ಅದಿರನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದರೆ ಅದನ್ನು ರಾತ್ರೋರಾತ್ರಿ ವಿದೇಶಕ್ಕೆ ರಫ್ತು ಮಾಡಲಾಗಿದೆ. ಬೇಲಿಕೇರಿ ಅದಿರು ನಾಪತ್ತೆಗೆ ಸಂಬಂಧ ರಾಜ್ಯ ಸರಕಾರ ಕೇವಲ ಎಫ್‌ಐಆರ್ ದಾಖಲು ಮಾಡಿ ಕೈತೊಳೆದು ಕೊಂಡಿದೆ ಎಂದು ದೂರಿದರು.

ಜನಾರ್ದನ ರೆಡ್ಡಿ ಹಾಗೂ ಆಂಧ್ರದ ಭಾರಿ ರಾಜಕಾರಣಿಗಳು, ಉದ್ಯಮಿಗಳ ಕಂಪನಿಗಳ ಅದಿರು ರಫ್ತು ಮಾಡಲು ಬೇಲೇಕೇರಿ ಬಂದರು ಬಳಕೆಯಲ್ಲಿತ್ತು. ಆಂಧ್ರದ ಸಿಬಿಐ ತಂಡ ಒಮ್ಮೆ ಇಲ್ಲಿ ಭೇಟಿ ನೀಡಿದ್ದು ಬಿಟ್ಟರೆ ಮತ್ತೆ ತನಿಖೆ ನಡೆದ ಯಾವುದೇ ವರದಿಯಾಗಿಲ್ಲ ಎಂದು ಹೆಗ್ಡೆ ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತ ಸಂಸ್ಥೆ ನೀಡಿದ ಎರಡನೇ ವರದಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಲೋಕಾಯುಕ್ತ ವರದಿ ಅಂಶಗಳನ್ನು ಜನತಾ ನ್ಯಾಯಾಲಯದ ವಿವೇಚನೆಗೆ ಬಿಟ್ಟಿದ್ದೇನೆ. ಆದರೆ, 25 ಸಾವಿರ ಪುಟಗಳ ಗಣಿ ಅಕ್ರಮ ವರದಿಯನ್ನು ಸರ್ಕಾರ ಇನ್ನೂ ಸ್ವೀಕರಿಸದಿರುವುದು ಬೇಸರ ತರಿಸಿದೆ ಎಂದು ನ್ಯಾ. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+