ಜಗನ್ ಆಸ್ತಿಪಾಸ್ತಿ ಮುಟ್ಟುಗೋಲಿಗೆ ಸಕಲ ಸಿದ್ಧತೆ

ಗುಪ್ತ ಮೂಲಗಳ ಪ್ರಕಾರ ಜಗನ್ ಸಕಲಾಸ್ತಿಯೂ ಅದರಲ್ಲೂ ಜಗತಿ ಪ್ರಕಾಶನ ಸಂಸ್ಥೆಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಅನುವು ಮಾಡಿಕೊಡಲು ಕೋರ್ಟಿನಲ್ಲಿ ಅರ್ಜಿ ಸಲ್ಲಿಸುವಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ರಾಜ್ಯ ಸರಕಾರ ಸೂಚನೆ ನೀಡಿದೆ ಎನ್ನಲಾಗಿದೆ. ಸಿಬಿಐ ಆರೋಪಪಟ್ಟಿ ಪ್ರಕಾರ ಜಗನ್ ಬಳಿ 1,246 ಕೋಟಿ ರು. ಅಕ್ರಮ ಆಸ್ತಿಯಿದೆ.
ಅಪರಾಧವೆಸಗಿ ಆಸ್ತಿ ಕ್ರೋಢೀಕರಣ ಮಾಡಿಕೊಂಡಿದ್ದರೆ ಅಂತಹ ಆಸ್ತಿಯನ್ನು ರಾಜ್ಯ ಅಥವಾ ಕೇಂದ್ರ ಸರಕಾರ ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಮೇಲೆ ತಿಳಿಸಿದ ಕಾನೂನಲ್ಲಿ ಅವಕಾಶವಿದೆ. ಪ್ರಕರಣದ ಸಂಬಂಧ ಕೋರ್ಟ್ ತನ್ನದೇ ಆದಂತಹ ತೀರ್ಪು ನೀಡುವುದಕ್ಕೂ ಮುನ್ನವೇ ಸಂಬಂಧಪಟ್ಟ ಸರಕಾರ ಅಂತಹ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು. ಜಗನ್ ತಮ್ಮ ಅಪ್ಪ ವೈಎಸ್ ರಾಜಶೇಖರ ರಡ್ಡಿ ಅವರು ಮುಖ್ಯಮಂತ್ರಿಯಾಗಿದ್ದಾಗ ಅಧಿಕಾರ ದುರುಪಯೋಗ ಪಡಸಿಕೊಂಡು ಸಂಪತ್ತು ಗುಡ್ಡೆ ಹಾಕಿದ್ದಾರೆ ಎಂದು ಸಿಬಿಐ ಆರೋಪಪಟ್ಟಿ ತಿಳಿಸಿದೆ.
ಕೋರ್ಟ್ ಕೇಸು ಪೂರ್ಣವಾಗುವವರೆಗೂ ಜಗನ್ ಆಸ್ತಿ ರಾಜ್ಯ ಸರಕಾರಕ್ಕೆ ಪರಭಾರೆಯಾಗುವುದಕ್ಕೆ ಅನುವು ಮಾಡಿಕೊಡಲು ಸಿಬಿಐ ತನ್ನ ಬಳಿಯಿರುವ ಜಗನ್ ಆಸ್ತಿಪಾಸ್ತಿಯ ಕೂಲಂಕಷ ವರದಿಯನ್ನು ಸರಕಾರಕ್ಕಾಗಿ ಸಿದ್ಧಪಡಿಸುತ್ತಿದೆ. 18 ಅಸೆಂಬ್ಲಿ ಮತ್ತು 1 ಲೋಕಸಭೆ ಉಪ ಚುನಾವಣೆಗಾಗಿ ಅಧಿಸೂಚನೆ ಪ್ರಕಟವಾಗುವುದಕ್ಕೂ ಮುನ್ನವೇ, ಶೀಘ್ರದಲ್ಲೇ ಈ ವಿವರ ಸಲ್ಲಿಕೆಯಾಗುವ ಅಂದಾಜಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications