ಫೋನ್ ಮೂಲಕ ವಿದೇಶಿ ಮದ್ಯ ಕೇಳಿದ ರೇಣುಕಾ

ಸರ್ಕಾರಿ ಕಚೇರಿಯಲ್ಲಿ ವಿದೇಶಿ ಮದ್ಯವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯ ಇಲ್ಲವೆಂದು ಕೋರ್ಟಿಗೆ ತಿಳಿಸಿ, ರೇಣುಕಾಚಾರ್ಯಗೆ ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿದ್ದರು. ಆದರೆ ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾ ಎನ್ ಕೆ ಸುಧೀಂದ್ರ ರಾವ್ ಅವರು ಅಬಕಾರಿ ಇಲಾಖೆಯ ಉಪ ಆಯುಕ್ತ, ದೂರುದಾರ ಮೋಹನ್ ಕುಮಾರ್ ಅವರಿಗೆ ಸೂಚಿಸಿ, ಪ್ರಕರಣಕ್ಕೆ ಮರು ಜೀವ ನೀಡಿದ್ದರು.
ಇದೀಗ, ದೂರುದಾರ ಮೋಹನ್ ಕುಮಾರ್ ಕೋರ್ಟಿಗೆ ಹೊಸ ಸಾಕ್ಷ್ಯ ಮಂಡಿಸಿದ್ದಾರೆ. ಮಾರ್ಚ್ 19ರಿಂದ 21ರವರೆಗೆ ಅಬಕಾರಿ ಇಲಾಖೆಯ ಎಲ್ಲ ದೂರವಾಣಿ ಕರೆಗಳನ್ನೂ ಪರಿಶೀಲಿಸಿ. ಯಾವ ಕರೆ ಎಲ್ಲಿಂದ, ಎಷ್ಟು ಅವಧಿ ಕಾಲ ಮಾತನಾಡಲಾಗಿದೆ ಎಂಬುದನ್ನು ಪರಿಶೀಲಿಸಿ ಎಂದು ಅವರು ಅಲವತ್ತುಕೊಂಡಿದ್ದಾರೆ.
ತಮ್ಮ ಕಚೇರಿಯಿಂದ 25 ಸಾವಿರ ರು. ನಗದು ಮತ್ತು 20 ಬಾಟಲಿ ವಿದೇಶಿ ಮದ್ಯ ಸರಬರಾಜು ಮಾಡುವಂತೆ ಸಚಿವರು ಕರೆ ಮಾಡಿ ಆಗ್ರಹಿಸಿರುವುದು ಇದರಿಂದ ಸಾಬೀತಾಗುತ್ತದೆ ಎಂಬುದು ಬೆಂಗಳೂರು ಅಬಕಾರಿ ಇಲಾಖೆಯ ಉಪ ಆಯುಕ್ತರ ಹೊಸ ವಾದ ಮಂಡನೆ.
ಆದರೆ ಬಜೆಟ್ ಮಂಡನೆ ಸಂಬಂಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲು ಈ ಫೋನ್ ಫೋನ್ ಕರೆಗಳನ್ನು ಮಾಡಿದ್ದಾಗಿ ರೇಣುಕಾಚಾರ್ಯ ಅವರು ಲೋಕಾಯುಕ್ತ ಪೊಲೀಸರಿಗೆ ತಿಳಿಸಿದ್ದರು.
ಇದಕ್ಕೆ ಉತ್ತರಿಸಿರುವ ಇಲಾಖೆಯ ಉಪ ಆಯುಕ್ತರ ಮೋಹನ್ ಕುಮಾರ್, 'ಸಚಿವರು ಇಲಾಖೆಯ ಆಯುಕ್ತರು ಮತ್ತು ಜಂಟಿ ಆಯುಕ್ತರ ಜತೆ ಚರ್ಚಿಸುತ್ತಾರೆ. ಉಪ ಆಯುಕ್ತರ ಜತೆಯಂತೂ ಅವರು ಚರ್ಚಿಸುವ ಸಾಧ್ಯತೆಯಿಲ್ಲ' ಎಂದು ಗಮನ ಸೆಳೆದಿದ್ದಾರೆ. ಇನ್ನು ಲೋಕಾಯುಕ್ತ ಪೊಲೀಸರು ಕ್ಷಿಪ್ರಗತಿಯಲ್ಲಿ ಸಚಿವರ ವಿಚಾರಣೆ ನಡೆಸಿ, ಕೈತೊಳೆದುಕೊಂಡಿದ್ದಾರೆ. ಇದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದೂ ತಿಳಿಸಿದರು.
ಜತೆಗೆ, ಜೆಸಿ ನಗರದಲ್ಲಿರುವ ಅಬಕಾರಿ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿ ನನ್ನನ್ನು ಬಂಧಿಸುವಾಗ ಇತರೆ ಉಪ ಆಯುಕ್ತರುಗಳೂ, ಇನ್ಸ್ಪೆಕ್ಟರುಗಳೂ ಇದ್ದರು. ಅವರನ್ನೂ ವಶಕ್ಕೆ ತೆಗೆದುಕೊಳ್ಳದೆ ಕೇವಲ ನನ್ನೊಬ್ಬನನ್ನೇ ಬಂಧಿಸಿರುವುದರ ಉದ್ದೇಶವಾದರೂ ಏನು ಎಂದು ಮೋಹನ್ ಕುಮಾರ್ ಕೋರ್ಟಿನಲ್ಲಿ ಪ್ರಶ್ನಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications