ಸದಾ ಕ್ಯಾಬಿನೆಟ್: 11 ಮಂದಿಗೆ ಮಾತ್ರ ಅದೃಷ್ಟ?

CM DV Sadananda Gowda
ಬೆಂಗಳೂರು, ಮೇ.6: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಒದಗಿ ಬರುವ ಸೂಚನೆ ಸಿಕ್ಕಿದೆ. ಮೇ 8ರೊಳಗೆ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ಗಡ್ಕರಿ ಅವರ ಜತೆ ಸಮಾಲೋಚನೆ ನಡೆಸಿ, ಸಂಪುಟ ವಿಸ್ತರಣೆ ದಿನಾಂಕ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.

11 ಮಂದಿ ಸಂಭವನೀಯ ಸಚಿವರ ಪಟ್ಟಿಯನ್ನು ವರಿಷ್ಠರಿಗೆ ಸಲ್ಲಿಸಲಾಗಿದೆ. ತಮ್ಮ ಬಳಿ 20ಕ್ಕೂ ಹೆಚ್ಚು ಖಾತೆಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ.ಈ ಹಿನ್ನೆಲೆಯಲ್ಲಿ ಆದಷ್ಟು ಬೇಗನೆ ಅದನ್ನು ಖಾತೆ ಹಂಚಿಕೆ ಮಾಡಲಾಗುವುದು ಎಂದು ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಂದಿನ ವಾರ ಸದಾನಂದ ಗೌಡ ಹಾಗೂ ಈಶ್ವರಪ್ಪ ಅವರು ಮತ್ತೊಮ್ಮೆ ನವದೆಹಲಿಗೆ ಹೋಗಲಿದ್ದಾರೆ. ಯಡಿಯೂರಪ್ಪ ಅವರ ಗಣಿ ಅಕ್ರಮ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ನೀಡುವ ತೀರ್ಪು ಹೊರಬೀಳುವ ತನಕ ಕಾಯಬೇಕಾಗಿಲ್ಲ ಎಂದು ಸದಾನಂದ ಗೌಡರು ಸ್ಪಷ್ಟಪಡಿಸಿದ್ದಾರೆ.

11 ಮಂದಿ ಸಚಿವರ ಸಂಭವನೀಯ ಪಟ್ಟಿಯನ್ನು ಅಂತಿಮಗೊಳಿಸಿ, ಸಂಪುಟ ವಿಸ್ತರಣೆ ದಿನಾಂಕ ನಿಗದಿಪಡಿಸುತ್ತಾರೆ ಎನ್ನಲಾಗಿದೆ. ಆದರೆ, 20 ಖಾತೆಗಳಲ್ಲಿ 11 ಮಂದಿಗೆ ಮಾತ್ರ ಅದೃಷ್ಟ ಸಿಗುವುದಾದರೆ ಉಳಿದವರ ಪಾಡೇನು? ಉಳಿದ ಖಾತೆಗಳಿಗೆ ಹೊಸಬರ ಬದಲಿಗೆ ಹಳೆಬರ ಖಾತೆ ಹಂಚಿಕೆ ಮಾಡಲಾಗುವುದೇ? ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+