ಉಮೇಶ್ ರೆಡ್ಡಿ ಕ್ಷಮಾದಾನ ತಿರಸ್ಕರಿಸಿದ ಬಿಜೆಪಿ ಸಂಪುಟ

ಸುಮಾರು 15 ಹತ್ಯೆ ಮತ್ತು ಅತ್ಯಾಚಾರ ಪ್ರಕರಣಗಲ್ಲಿ ಭಾಗಿಯಾಗಿರುವ ಉಮೇಶ್ ರೆಡ್ಡಿಗೆ 2006ರಲ್ಲಿ ತ್ವರಿತಗತಿ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಉಮೇಶ್ ರೆಡ್ಡಿಯ ಮೃಗೀಯ ವ್ಯಕ್ತಿತ್ವ, ನಿರ್ದಯವಾಗಿ ಹತ್ಯೆ ಮಾಡಿದ ರೀತಿಯನ್ನು ಪರಿಗಣಿಸಿ ರೆಡ್ಡಿ ಮರಣದಂಡನೆಗೆ ಅರ್ಹ ಎಂದು ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿತ್ತು.
ಉಮೇಶ್ ರೆಡ್ಡಿಯ ತಾಯಿ ಗೌರಮ್ಮ ಅವರು ಮಗನಿಗೆ ಕ್ಷಮೆ ನೀಡಬೇಕೆಂದು ರಾಷ್ಟ್ರಪತಿಗೆ ಮನವಿಪತ್ರ ಸಲ್ಲಿಸಿದ್ದಾರೆ. ಅದನ್ನು ಕರ್ನಾಟಕದ ರಾಜ್ಯಪಾಲರಿಗೂ ರವಾನಿಸಿದ್ದಾರೆ. ಈಗ ಪತ್ರ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕೈಯಲ್ಲಿದೆ. ಯಾವುದೇ ಕಾರಣಕ್ಕೂ ದಯೆ ನೀಡಬಾರದೆಂದು ಸದಾನಂದ ಗೌಡರ ಸಂಪುಟ ರಾಜ್ಯಪಾಲರಿಗೆ ಮನವಿ ಮಾಡಿದೆ.
ಒಟ್ಟು ನಾಲ್ಕು ಪ್ರಕರಣಗಳಲ್ಲಿ ರೆಡ್ಡಿ ಅಪರಾಧ ಸಾಬೀತಾಗಿದೆ. ಜಯಶ್ರೀ ಮರಡಿ ಸುಬ್ಬಯ್ಯ ಎಂಬ ವಿಧವೆಯನ್ನು 1998ರಲ್ಲಿ ಅತ್ಯಾಚಾರ ಮಾಡಿ, ನಿರ್ದಾಕ್ಷಿಣ್ಯವಾಗಿ ಹತ್ಯೆಗೈದ ಪ್ರಕರಣದಲ್ಲಿ 2006ರಲ್ಲಿ ತ್ವರಿತ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಅದನ್ನು 2007ರಲ್ಲಿ ಹೈಕೋರ್ಟ್ ಎತ್ತಿಹಿಡಿದಿತ್ತು.
ಚಿತ್ರದುರ್ಗದ ಉಮೇಶ್ ರೆಡ್ಡಿ ಬೆಂಗಳೂರಿನಲ್ಲಿ ಮಾತ್ರವಲ್ಲ, ಜಮ್ಮು ಕಾಶ್ಮೀರ, ಮೈಸೂರು, ಪುಣೆ, ಮುಂಬೈ, ಅಹ್ಮದಾಬಾದ್, ಬರೋಡಾ, ಹುಬ್ಬಳ್ಳಿ ಮುಂತಾದ ಕಡೆಗಳಲ್ಲಿ ಅಮಾನವೀಯ ಕೃತ್ಯ ಎಸಗಿದ್ದಾನೆ. ಮಹಿಳೆಯರ ಒಳಉಡುಪುಗಳನ್ನು ಕದ್ದು ಸಂಗ್ರಹಿಸುತ್ತಿದ್ದ. ಭಾರತೀಯ ಸಂವಿಧಾನದ 161 ಅನುಚ್ಛೇದದ ಪ್ರಕಾರ ರಾಜ್ಯಪಾಲರು ಮತ್ತು ಸಂವಿಧಾನದ 72ನೇ ಅನುಚ್ಛೇದದ ಪ್ರಕಾರ ರಾಷ್ಟ್ರಪತಿಗಳು ಕ್ಷಮಾದಾನ ಮಾಡುವ ಹಕ್ಕು ಹೊಂದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications