ಹಜ್ ಯಾತ್ರೆ ಸಬ್ಸಿಡಿ, ಸುಪ್ರೀಂಕೋರ್ಟ್ ಆಕ್ಷೇಪ

ಹಜ್ ಯಾತ್ರೆಗೆ ನೀಡುತ್ತಿದ್ದ ಅನುದಾನಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿತ್ತು. ಮುಸ್ಲಿಮರಿಗೆ ಸಬ್ಸಿಡಿಯನ್ನು 5 ವರ್ಷಗಳಿಗೊಮ್ಮೆ ಬದಲಾಗಿ ಜೀವಮಾನದಲ್ಲಿ ಒಮ್ಮೆ ಮಾತ್ರ ನೀಡಲು ನಿರ್ಧರಿಸಲಾಗಿದೆ ಎಂದು ಸುಪ್ರೀಂ ಕೋರ್ಟಿಗೆ ಕೇಂದ್ರ ಸರ್ಕಾರ ಏಪ್ರಿಲ್ 16ರಂದು ಅಫಿಡವಿಟ್ ಸಲ್ಲಿಸಿತ್ತು.
ಇದನ್ನು ಅನುಮೋದಿಸಿರುವ ನ್ಯಾ ಅಲ್ತಮಾಸ್ ಕಬೀರ್ ಹಾಗೂ ರಂಜನಾ ಪ್ರಕಾಶ್ ದೇಸಾಯಿ ಅವರಿದ್ದ ಪೀಠ ನೀಡಿರುವ ಆದೇಶದಲ್ಲಿ ಯಾತ್ರಿಗಳ ಜೊತೆ ಪ್ರಧಾನಿ ಮಂತ್ರಿಗಳ ನಿಯೋಗ ತೆರಳುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಹಜ್ ಸಮಿತಿ ಯಾತ್ರಾರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಬಗ್ಗೆ ಕೋರ್ಟ್ ನಿಗಾವಹಿಸಲು ನಿರ್ಧರಿಸಿದೆ. ಅನುದಾನವನ್ನು 10 ವರ್ಷದೊಳಗೆ ನೀಡದಿದ್ದರೆ ಸಬ್ಸಿಡಿ ತೆಗೆದು ಹಾಕಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಹಜ್ ಯಾತ್ರೆ ಬಗ್ಗೆ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲೂ ಭಾರಿ ಚರ್ಚೆ ನಡೆದಿದೆ. ನಿಮ್ಮ ಅಭಿಪ್ರಾಯ @OneindiaKannada ಗೆ ತಿಳಿಸಿ #haj Tag ಬಳಸಿದರೆ ಇನ್ನೂ ಉತ್ತಮ. ಈ ಕ್ಷಣ ಬಂದ ಒಂದು ಪ್ರತಿಕ್ರಿಯೆ ಹೀಗಿದೆ... RT: @KiranKS: Est Haj subsidy by "secular" India for 10 years= Rs.8,500,00,00,000. At Rs.22 calc, govt can feed 13 CRORE rural poor for a MONTH with that!
ಸರ್ಕಾರ ಸಲ್ಲಿಸಿದ ಅಫಿಡವಿಟ್ ನ ಅಂಶಗಳು: 2012ನೆ ಸಾಲಿಗೆ ನೀಡಲಾಗುವ ಹಜ್ ಸಬ್ಸಿಡಿ ಮೊತ್ತವನ್ನು ಬಹಿರಂಗಪಡಿಸಲು ಸರ್ಕಾರ ನಿರಾಕರಿಸಿತ್ತು. ಹಾಜಿಗಳು ತಮ್ಮ ಹಜ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಬಳಿಕವೇ ಅದರ ನಿಖರವಾದ ಮೊತ್ತ ತಿಳಿಯುವುದೆಂದು ಸರ್ಕಾರ ಕೋರ್ಟಿಗೆ ತಿಳಿಸಿತ್ತು.
70 ವರ್ಷಗಳ ಮೇಲಿನವರಿಗೆ ಹಾಗೂ ಈ ಹಿಂದೆ ಅರ್ಜಿ ಸಲ್ಲಿಸಿಯೂ ಅವಕಾಶ ದೊರೆಯದವರಿಗೆ ಆದ್ಯತೆ ನೀಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ, ಹಜ್ ಯಾತ್ರಿಗಳ ಜೊತೆ 9-10 ಅಧಿಕಾರಿಗಳನ್ನು ಕಳಿಸುವುದನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರ ಹಜ್ ಯಾತ್ರೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಬಾರದು ಎಂದು ಸುಪ್ರೀಂಕೋರ್ಟ್ ಎಚ್ಚರಿಸಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications