ಕರ್ನಾಟಕ ಪೊಲೀಸರ ಮೇಲೆ ಸಿಎಂ ನಿತೀಶ್ ಗರಂ

ಬಿಹಾರ್ ನ ದರಬಾಂಗ್ ಜಿಲ್ಲೆ ಬ್ರಹ ಸಮೇಲಿ ಗ್ರಾಮದ ಮಹಮದ್ ಖಫೀದ್ ನನ್ನು ಜಾರ್ಖಂಡ್ ನಲ್ಲಿ ಬಂಧಿಸಲಾಗಿದೆ. ಇಂಡಿಯನ್ ಮುಜಾಹೀದ್ದೀನ್ ಸಂಘಟನೆಗೆ ಸೇರಿದ ಖಫೀದ್ ಶಿಕ್ಷಕ ವೃತ್ತಿಯಲ್ಲಿದ್ದು ಮುಸ್ಲಿಂ ಯುವಕರಿಗೆ ಜಿಹಾದಿ ಬಗ್ಗೆ ಪ್ರಚೋದನೆ ಮಾಡುತ್ತಿದ್ದ ಎನ್ನಲಾಗಿದೆ. ಆದರೆ, ಈತನನ್ನು ಬಂಧಿಸುವಲ್ಲಿ ಕರ್ನಾಟಕ ಪೊಲೀಸರು ಶಿಷ್ಟಾಚಾರ ಮರೆತಿದ್ದಾರೆ. ಬಿಹಾರ್ ಪೊಲೀಸರಿಗೆ ಒಂದಿಷ್ಟು ಸುಳಿವು ನೀಡದೆ ರಾಜ್ಯದಲ್ಲಿ ನುಗ್ಗಿದ್ದಾರೆ ಎಂದು ನಿತೀಶ್ ಕುಮಾರ್ ಆರೋಪಿಸಿದ್ದಾರೆ.
ಜಂಟಿ ಪೊಲೀಸ್ ಆಯುಕ್ತ ಬಿ ದಯಾನಂದ್ ನೇತೃತ್ವದಲ್ಲಿ ಎಸಿಪಿ ಬಿಎಸ್ ನ್ಯಾಮಗೌಡ, ಇನ್ಸ್ ಪೆಕ್ಟರ್ ವೇಣುಗೋಪಾಲ್, ಕೆ ನಾಗರಾಜು ಅವರ ತಂಡ ಈ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಿತ್ತು.
ನಿತೀಶ್ ಗುಡುಗು: ಕರ್ನಾಟಕ ಪೊಲೀಸರ ವರ್ತನೆ ಬಗ್ಗೆ ವರದಿಯನ್ನು ನಿರೀಕ್ಷಿಸುತ್ತಿದ್ದೇನೆ. ವರದಿ ಬಂದ ನಂತರ ಕೇಂದ್ರ ಗೃಹ ಸಚಿವಾಲಯಕ್ಕೆ ಈ ಬಗ್ಗೆ ವಿವರಣೆ ನೀಡಲಾಗುವುದು.NCTC ಸಭೆಯಲ್ಲೂ ಈ ವಿಷಯ ಪ್ರಸ್ತಾಪಿಸುತ್ತೇನೆ. ಈ ನೆಲದ ಕಾನೂನನ್ನು ಪಾಲಿಸುವುದು, ಗೌರವಿಸುವುದು ಪರರಾಜ್ಯ ಪೊಲೀಸರ ಮೊದಲ ಕರ್ತವ್ಯವಾಗಿದೆ ಎಂದು ನಿತೀಶ್ ಗುಡುಗಿದ್ದಾರೆ.
NCTC ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾದರೆ, ಗೃಹ ಸಚಿವ ಪಿ ಚಿದಂಬರಂಗೆ ಪ್ರಮುಕ ಅಸ್ತ್ರ ಸಿಕ್ಕಂತಾಗುತ್ತದೆ. NCTC ರೀತಿಯ ಕೇಂದ್ರೀಯ ಉಗ್ರ ನಿಗ್ರಹ ತಂಡ ಇದ್ದರೆ ಈ ರೀತಿ ಸಮಸ್ಯೆ ಬರುತ್ತಿರಲಿಲ್ಲ ಎಂದು ಚಿದು ವಾದಿಸುವ ಸಾಧ್ಯತೆಯಿದೆ.
ದರ್ಬಾಂಗ ಜಿಲ್ಲಾ ಎಸ್ಪಿ ಗರಿಮಾ ಮಲಿಕ್ ಪ್ರಕಾರ, ಕರ್ನಾಟಕ ಪೊಲೀಸರು ಹಿರಿಯ ಅಧಿಕಾರಿಗಳಾಗಲಿ, ಸ್ಥಳೀಯ ಪೊಲೀಸರಿಗಾಗಲಿ ವಿಷ್ಯ ತಿಳಿಸಿರಲಿಲ್ಲ. ಅಬ್ದುಲ್ ಸಲಾಂ ಅವರ ಮಗ ಅಖ್ತರ್ ನನ್ನು ಬಂಧಿಸಿದ ನಂತರ ನಮಗೆ ವಿಷಯ ತಿಳಿಸಲಾಯಿತು ಎಂದಿದ್ದಾರೆ.
ಪಾಕಿಸ್ತಾನಕ್ಕೆ ತೆರಳಲು ಸಿದ್ಧತೆ ನಡೆಸಿದ್ದ ಅಖ್ತರ್ ನನ್ನು ಬೆಂಗಳೂರಿಗೆ ಕರೆತರಲು ರಾಂಚಿ ಕೋರ್ಟ್ ನಲ್ಲಿ ಮನವಿ ಸಲ್ಲಿಸಲಾಗಿದೆ. ಹೆಚ್ಚಿನ ವಿಚಾರಣೆ ಅಗತ್ಯವಿರುವುದರಿಂದ ಆದಷ್ಟು ಬೇಗ ಬೆಂಗಳೂರಿಗೆ ಕರೆ ತರಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications