ಕುಂ ವೀರಭದ್ರಪ್ಪ ಹೊಸ ಕಾದಂಬರಿ ಹೆಸರಿನ ವಿವಾದ

ಕಾದಂಬರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮನ ಕುರಿತಾಗಿ ಅನೇಕ ಆಕ್ಷೇಪಾರ್ಹ ಸಂಗತಿಗಳಿದ್ದು, ಕಾದಂಬರಿಗೂ ಹೇಮರೆಡ್ಡಿ ಮಲ್ಲಮ್ಮನ ಚರಿತ್ರೆಗೂ ತಾಳ ಮೇಳವಿಲ್ಲ. ಪ್ರಚಾರದ ಭರದಲ್ಲಿ ಇತ್ತೀಚಿಗೆ ಸಾಹಿತಿಗಳೆನಿಸಿಕೊಂಡವರು ಮಹಾನ್ ವ್ಯಕ್ತಿಗಳ ಬಗ್ಗೆ ಇಲ್ಲ ಸಲ್ಲದ ಬರೆಯುವದನ್ನು ರೂಢಿಸಿಕೊಂಡಿದ್ದಾರೆ. ಇವರ ಇಂತಹ ನಡವಳಿಕೆಗಳಿಂದ ಕೋಟ್ಯಂತರ ಅನುಯಾಯಿಗಳಿಗೆ ನೋವಾಗುತ್ತದೆ ಎನ್ನುವ ಪರಿಜ್ಞಾನವೂ ಇಲ್ಲದಿರುವುದು ದುರಂತದ ವಿಷಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೇಮರೆಡ್ಡಿ ಮಲ್ಲಮ್ಮನ ಕಥೆಯು ಎಂಬ ಶೀರ್ಷಿಕೆಯುಳ್ಳ ಪುಸ್ತಕದಲ್ಲಿ ಹೇಮರೆಡ್ಡಿ ಕುಟುಂಬವನ್ನು ಕೊಲೆಗಡುಕರ ಕುಟುಂಬವೆಂಬಂತೆ ಚಿತ್ರಿಸಲಾಗಿದ್ದು, ಈ ಮೂಲಕ ಹೇಮರೆಡ್ಡಿ ಮಲ್ಲಮ್ಮ ಹಾಗೂ ರೆಡ್ಡಿ ಜನಾಂಗವನ್ನು ಅವಮಾನ ಮಾಡಿದ್ದಾರೆ. ಜನರ ಭಾವನೆಗಳ ಜೊತೆಗೆ ಚೆಲ್ಲಾಟವಾಡುವ ಹಕ್ಕು ಯಾರಿಗೂ ಇಲ್ಲ. ಆದ್ದರಿಂದ ಸರಕಾರ ಮೇ 12ರಂದು ನಡೆಯಲಿರುವ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ರದ್ದುಪಡಿಸಿ ಶೀರ್ಷಿಕೆ ಬದಲಿಸಿದ ನಂತರವೇ ಪುಸ್ತಕದ ಬಿಡುಗಡೆಗೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಅಭಿವ್ಯಕ್ತಿ ಸ್ವತಂತ್ರ್ಯ ಸರ್ವರ ಹಕ್ಕು. ಆದರೆ ಡಾ.ಕುಂ.ವೀರಭದ್ರಪ್ಪನವರು ತಮ್ಮ ಕಾದಂಬರಿಗೆ ಸಂಬಂಧವೇ ಇಲ್ಲದ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮನ ಹೆಸರನ್ನು ಇಟ್ಟಿದ್ದು ಅಕ್ಷಮ್ಯ ಅಪರಾಧ. ಕೂಡಲೇ ಸರಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿರುವ ರೆಡ್ಡಿ ಜನಾಂಗವನ್ನು ಸಂಘಟಿಸಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಬಿಡುಗಡೆ ಎಲ್ಲಿ, ಎಂದು? : ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಮೇ 12ರಂದು ಬೆಳಿಗ್ಗೆ 10.30ಕ್ಕೆ ಪುಸ್ತಕ ಬಿಡುಗಡೆಯಾಗುತ್ತಿದೆ. ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಚಂದ್ರಶೇಖರ ಕಂಬಾರರು ಬಿಡುಗಡೆ ಮಾಡುತ್ತಿದ್ದಾರೆ. ಅಧ್ಯಕ್ಷರಾಗಿ ವಿಮರ್ಶಕರಾದ ಡಾ. ಸಿಎನ್ ರಾಮಚಂದ್ರನ್ ಮತ್ತು ಮುಖ್ಯ ಅತಿಥಿಯಾಗಿ ಡಾ. ಕಮಲಾ ಹಂಪನಾ ಭಾಗವಹಿಸುತ್ತಿದ್ದಾರೆ. ವಿಮರ್ಶಕ ಡಾ. ಓ.ಎಲ್. ನಾಗಭೂಷಣ ಸ್ವಾಮಿಯವರು ಪುಸ್ತಕದ ಕುರಿತು ಮಾತನಾಡಲಿದ್ದಾರೆ. ಪುಸ್ತಕವನ್ನು ಸಪ್ನ ಬುಕ್ ಹೌಸ್ ಪ್ರಕಟಿಸಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications