ಗುರೂಜಿ ಮಾಹಿತಿ ತೆಗೆದುಹಾಕಲು Googleಗೆ ಆದೇಶ

ಶ್ರೀ ರವಿಶಂಕರ ಗುರೂಜಿ ಅವರ ಅನುಯಾಯಿಗಳು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಆಲಿಸಿದ ಜಸ್ಟೀಸ್ ಮನಮೋಹನ್ ಸಿಂಗ್ ಅವರು Google ಕಂಪನಿಗೆ ಮತ್ತು ಅವಹೇಳನಕಾರಿ ಮಾಹಿತಿ ಪ್ರಕಟಿಸಿದ ಬ್ಲಾಗರ್ ಜಿತೇಂದರ್ ಬಗ್ಗಾ ಅವರಿಗೆ ಈ ಆದೇಶ ನೀಡುವುದರ ಜತೆಗೆ ನೋಟಿಸ್ ಸಹ ಜಾರಿ ಮಾಡಿದೆ.
ಮಧ್ಯಂತರ ತೀರ್ಪನ್ನು ಪಾಲಿಸದಿದ್ದಲ್ಲಿ ತೀವ್ರ ಕಟ್ಟುನಿಟ್ಟಿನ ಕ್ರಮ ಮತ್ತು ಅಪಾರ ನಷ್ಟ ಎದುರಿಸಬೇಕಾಗುತ್ತದೆ ಎಂದೂ ನ್ಯಾಯಪೀಠ ಎಚ್ಚರಿಸಿದೆ. ಮುಂದಿನ ಆದೇಶ ಜಾರಿಯಾಗುವವರೆಗೂ ಈ ತಕ್ಷಣಕ್ಕೆ ಅನ್ವಯವಾಗುವಂತೆ ಅಂದರೆ ಮಧ್ಯಂತರ ಆದೇಶದ ಪ್ರತಿ ಕೈಸೇರಿದ 36 ಗಂಟೆಯೊಳಗಾಗಿ ಆಕ್ಷೇಪಾರ್ಹ ಮಾಹಿತಿಯನ್ನು ಕಡ್ಡಾಯವಾಗಿ ತೆಗೆದುಹಾಕಲೇಬೇಕು ಎಂದು ಪೀಠ ಆದೇಶ ನೀಡಿದೆ.
ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಅಥವಾ ಶ್ರೀ ರವಿಶಂಕರ ಗುರೂಜಿ ಅವರಿಗೆ ಸಂಬಂಧಪಟ್ಟ ಮಾಹಿತಿಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬ್ಲಾಗರ್ ಜಿತೇಂದರ್ ಬಗ್ಗಾ ಇಮೇಲ್ ಮಾಡಬಾರದೂ ಎಂದೂ ಪೀಠ ನಿರ್ದೇಶಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 30ಕ್ಕೆ ನಿಗದಿಪಡಿಸಲಾಗಿದೆ.
ಶ್ರೀ ರವಿಶಂಕರ ಗುರೂಜಿ ಅವರ ಕೆಲ ಅನುಯಾಯಿಗಳೂ ಸೇರಿದಂತೆ Vyakti Vikas Kendra, India Public Charitable Trust ಈ ಮಾನನಷ್ಟ ಮೊಕದ್ದಮೆ ಹೂಡಿತ್ತು. ಪ್ರಕರಣದಲ್ಲಿ 5 ಕೋಟಿ ರುಪಾಯಿ ಮಾನನಷ್ಟ ಪರಿಹಾರ ಸಹ ಕೇಳಿದೆ.
http://www.blogger.com/ ಮುಖಾಂತರ ಬ್ಲಾಗರ್ ಜಿತೇಂದರ್ ಬಗ್ಗಾ ಅವರು ಅಸಂಖ್ಯಾತ ಇಮೇಲುಗಳು ಮತ್ತು ಲೇಖನಗಳನ್ನು ಅವ್ಯಾಹತವಾಗಿ ಕಳುಹಿಸಿದ್ದರು. ಅದರಲ್ಲಿ ನಿಂದಾನಾತ್ಮಕ, ಅಶ್ಲೀಲ ಮತ್ತು ದುರುದ್ದೇಶಪೂರಿತ ಮಾಹಿತಿಯಿತ್ತು ಎಂದು ಟ್ರಸ್ಟ್ ನ್ಯಾಯಾಲಯದ ಗಮನ ಸೆಳೆದಿತ್ತು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications