ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬೇಲ್ ಪಡೆದಿರುವ ಜನಾರ್ದನ ರೆಡ್ಡಿ ಅವರು 5 ಲಕ್ಷ ಶ್ಯೂರಿಟಿ ನೀಡಬೇಕು. ದೇಶಬಿಟ್ಟು ಹೊರಗೆ ಹೋಗಬಾರದು ಎಂದು ನಾಂಪಲ್ಲಿ ಸಿಬಿಐ ನ್ಯಾಯಾಲಯ ಆದೇಶ ನೀಡಿದೆ.
ಚಂಚಲಗುಡ ಜೈಲಿನಲ್ಲಿದ್ದ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಾಡಿ ವಾರೆಂಟ್ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಯಿತು. ಎಎಂಸಿ(ಅಸೋಸಿಯೇಟೆಡ್ ಮೈನಿಂಗ್ ಕಂಪನಿ) ಹಾಗೂ ಡೆಕ್ಕನ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಇನ್ನೂ ವಿಚಾರಣೆ ಜಾರಿಯಲ್ಲಿದೆ. ಮೇ.23ರವರೆಗೂ ಗಾಲಿ ಜನಾರ್ದನ ರೆಡ್ಡಿ ಹಾಗೂ ಮೆಹಫುಜ್ ಅಲಿ ಖಾನ್ ಅವರ ಬಂಧನ ಅವಧಿಯನ್ನು ವಿಸ್ತರಿಸಲಾಗಿದೆ.












Click it and Unblock the Notifications