ಸತ್ತರೂ ಚಿಂತೆ, ಹುಟ್ಟಿದರೂ ಚಿಂತೆ : ಇದು ಕೆಂಭಾವಿ

ಬೇರೆ ಗ್ರಾಮಗಳಲ್ಲಿ, ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗೆ ಹೇಗೆ ಚಿಕಿತ್ಸೆ ಕೊಡುತ್ತಾರೋ ಗೊತ್ತಿಲ್ಲ. ಆದರೆ, ಯಾದಗಿರಿಯಲ್ಲಿ ಮಾತ್ರ ಬಾಣಂತಿಯರನ್ನು ಆಸ್ಪತ್ರೆಯ ಕಾರಿಡಾರಿನಲ್ಲಿ ಚಿಕಿತ್ಸೆ ಕೊಡುತ್ತಿರುವ ಅಥವಾ ಪರೀಕ್ಷಿಸುವ ದೃಶ್ಯ ನಿಜಕ್ಕೂ ಹಸಿ ಬಾಣಂತಿಯರ ಬಗ್ಗೆ, ಆ ಪುಟ್ಟ ಮಕ್ಕಳ ಅಮ್ಮಂದರ ಬಗ್ಗೆ ನಿಜಕ್ಕೂ ಕನಿಕರ ಮೂಡಿಸುತ್ತದೆ.
ಹೀಗೆ ಆಸ್ಪತ್ರೆಯ ಆವರಣದಲ್ಲಿ ಬಾಣಂತಿಯರಿಗೆ ಚಿಕಿತ್ಸೆ ಕೊಡುತ್ತಿರುವ ಕೆಂಭಾವಿ ಆಸ್ಪತ್ರೆಯು ಅವ್ಯವಸ್ಥೆಯ ಆಗರವಾಗಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಬಾಣಂತಿಯರಿಗೆ ಸರಿಯಾದ ವ್ಯವಸ್ಥೆಯಿಲ್ಲದೇ ಆಸ್ಪತ್ರೆಯ ಆವರಣದಲ್ಲಿಯೇ ವೈದ್ಯರು ಚಿಕಿತ್ಸೆ ಕೊಡುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಹಾಪುರ ಹಾಗೂ ಗುಲ್ಬರ್ಗಾ ಜಿಲ್ಲೆಗೆ ಕಳುಹಿಸಿಕೊಡಲಾಗುತ್ತದೆ. ಹೀಗೆ ಕಳುಹಿಸಿಕೊಡುವಾಗ ಮಾರ್ಗ ಮಧ್ಯೆ ಅನೇಕ ತಾಯಂದಿರೂ ಮೃತಪಟ್ಟಿರುವ ಘಟನೆಗಳು ಜರುಗಿವೆ.
ಪಡಬಾರದ ಕಷ್ಟ ಪಡುತ್ತಿರುವ ಮಹಿಳೆಯರು : ಆಸ್ಪತ್ರೆಗೆ ಶವಗಳನ್ನು ತಂದರೆ ಇತರ ಸಾಮಾನ್ಯ ರೋಗಿಗಳ ಜೊತೆಗೆ ಶವವನ್ನು ಇಡುತ್ತಾರೆ. ಕಿತ್ತು ಹೋಗಿರುವ ಕಟ್ಟಡದ ಛಾವಣಿಗಳು, ಬೆಡ್ಗಳು ಅಲ್ಪ ಸ್ವಲ್ಪ ಇದ್ದರೂ ಕೂಡ ಅವು ಆಟಕ್ಕೆ ಉಂಟು ಲೆಕ್ಕಕ್ಕಿಲ್ಲ ಅನ್ನುವ ಹಾಗಾಗಿವೆ. ಶೌಚಾಲಯ ಕೂಡ ಇಲ್ಲಾ. ಇದರಿಂದ ಬಾಣಂತಿಯರು ಪಡಬಾರದ ಕಷ್ಟ ಪಡುತ್ತಿದ್ದಾರೆ. ಮಹಿಳೆಯರು ಸ್ನಾನ ಮಾಡಿದರೆ ಆಸ್ಪತ್ರೆಯ ಆವರಣದಲ್ಲಿಯೇ ಬಟ್ಟೆ ಬದಲಾಯಿಸುತ್ತಾರೆಂದರೆ ವ್ಯವಸ್ಥೆ ಯಾವ ಮಟ್ಟದಲ್ಲಿದೆ ಎಂದು ಊಹಿಸಿ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
1965ರಲ್ಲಿ ಪ್ರಾರಂಭವಾದ ಈ ಪ್ರಾಥಮಿಕ ಆರೋಗ್ಯ ಕೇಂದ್ರವು, ರಾಜ್ಯದಲ್ಲಿಯೇ ದಾಖಲೆ ಪ್ರಮಾಣದಲ್ಲಿ ಹೆರಿಗೆ ಮಾಡಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಿಂದಿಕ್ಕಿದೆ. ಅದು ಮಹಿಳಾ ವೈದ್ಯರಿಲ್ಲದೇ ಇರುವ ಸಿಬ್ಬಂದಿಗಳೇ ಹೆರಿಗೆ ಮಾಡಿಸುತ್ತಾರೆ. ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಆಸ್ಪತ್ರೆಯ ಸಮವಸ್ತ್ರಗಳನ್ನು ಸಹ ಧರಿಸುವುದಿಲ್ಲ. ಹೀಗಾಗಿ ಆಸ್ಪತ್ರೆಯಲ್ಲಿ ಯಾರು ನರ್ಸ್ಗಳು ಯಾರು ರೋಗಿಗಳು ಅನ್ನುವುದೇ ತಿಳಿಯುವುದಿಲ್ಲ. ಸುರಪುರ ತಾಲ್ಲೂಕ-ಶಹಾಪುರ ಮತಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೆಂಭಾವಿ ಹೋಬಳಿ ಗ್ರಾಮವು, ಸುಮಾರು 20,000 ಜನಸಂಖ್ಯೆ ಹೊಂದಿದೆ. ಜನಸಂಖ್ಯೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ ಸಮುದಾಯ ಆರೋಗ್ಯ ಕೇಂದ್ರ ಮಾಡಬೇಕು. ಆದರೆ ರಾಜಕೀಯದ ಕರಿನೆರಳಿನಿಂದ, ಸಿಬ್ಬಂದಿಗಳ ಕೊರತೆಯಿಂದ ಹಾಗೂ ಸರ್ಕಾರದ ನಿಷ್ಕಾಳಜಿಯಿಂದ ಆಸ್ಪತ್ರೆಯು ರೋಗಗ್ರಸ್ಥವಾಗಿ ಮಾರ್ಪಟ್ಟಿದೆ.
ಅದೇನೇ ಇರ್ಲಿ. ಸರ್ಕಾರಗಳು ಜನರಿಗೆ ಆ ಸೌಲಭ್ಯ ಕೊಡುತ್ತೇವೆ, ಈ ಸೌಲಭ್ಯ ಕೊಡುತ್ತೇವೆ ಅಂತ ಬರೀ ದೊಡ್ಡ ದೊಡ್ಡ ಜಾಹೀರಾತುಗಳನ್ನು ಹಾಕಿಕೊಳ್ಳುತ್ತವೆ, ಆದರೆ ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇಂದಿಗೂ ಸಹ ಕನಿಷ್ಠ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಸರ್ಕಾರ ಇನ್ಮುಂದಾದರೂ ಸಹ ಇತ್ತ ಕಡೆ ಗಮನ ಹರಿಸಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಕ್ರಮ ಕೈಗೊಳ್ಳಬೇಕು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications