ಯಡಿಯೂರಪ್ಪ ಪಕ್ಷ ಬಿಡುವುದಿಲ್ಲ: ಸದಾನಂದ ಗೌಡ

ಯಡಿಯೂರಪ್ಪ ಅವರು ಪಕ್ಷ ತೊರೆಯುವುದಿಲ್ಲ ಇದು ಅವರು ಕಟ್ಟಿ ಬೆಳೆಸಿದ ಪಕ್ಷ. ಅವರ ಬೇಡಿಕೆಗಳು ಏನಿದ್ದರೂ ಹೈಕಮಾಂಡ್ ಜೊತೆ ಚರ್ಚಿಸಿ ಬಗೆಹರಿಸಿಕೊಳ್ಳಲಿದ್ದಾರೆ. ಯಡಿಯೂರಪ್ಪ ಆಗಲಿ ಅವರ ಬೆಂಬಲಿತ ಶಾಸಕರಾಗಲಿ ನೀಡುವ ರಾಜೀನಾಮೆ ಸ್ವೀಕರಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಅರುಣ್ ಜೇಟ್ಲಿ ಸಂಧಾನ ಸಫಲ: ಯಡಿಯೂರಪ್ಪ ಅವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದ ಹಿರಿಯ ನಾಯಕ ಅರುಣ್ ಜೇಟ್ಲಿ ಅವರು ಯಡಿಯೂರಪ್ಪ ಅವರ ಮನವೊಲಿಸುವಲ್ಲಿ ಸಫಲರಾಗಿದ್ದಾರೆ (ಸಮಯ 3.28 ನಿಮಿಷ). ಹೀಗಾಗಿ ಯಡಿಯೂರಪ್ಪ ಅವರು ಪಕ್ಷ ತೊರೆಯುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.
ಸಂಜೆ 4 ಗಂಟೆಗೆ ಕೇವಲ ಔಪಚಾರಿಕವಾಗಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಪಕ್ಷ ಬಿಡುವುದಿಲ್ಲ ಎಂದು ಯಡಿಯೂರಪ್ಪ ಘೋಷಿಸುವ ಸಾಧ್ಯತೆಯಿದೆ.












Click it and Unblock the Notifications