ಸಿಬಿಐ ತನಿಖೆ- ಜಯ ಬಿಎಸ್ವೈಗೆ: ಆಚಾರ್ಯ ಅಭಯ

ಗಮನಾರ್ಹವೆಂದರೆ ಆಚಾರ್ಯ ಅವರು ಮೊದಲಿನಿಂದಲೂ ಯಡಿಯೂರಪ್ಪ ಅವರಿಗೆ ಕಾನೂನು ಸಲಹೆ ನೀಡುತ್ತಲೇ ಬಂದಿದ್ದಾರೆ. ತಾವು AG ಆಗಿದ್ದಾಗಲೇ ಪ್ರಕರಣವೊಂದರಲ್ಲಿ (ಭದ್ರಾ ಮೇಲ್ದಂಡೆ ಯೋಜನೆ) ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲಹೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಅವರು AG ಆಗುಳಿದಿಲ್ಲ. ಆದ್ದರಿಂದ ಮತ್ತಷ್ಟು ಮುತುವರ್ಜಿಯಿಂದ ಮಾಜಿ ಮುಖ್ಯಮಂತ್ರಿಯ ನೆರವಿಗೆ ಧಾವಿಸಿದ್ದಾರೆ. ಜತೆಗೆ ಸಿಬಿಐ ತನಿಖೆಯಿಂದ ಏನೂ ಸಾಧಿಸಲಾಗದು ಎಂದು ಅಭಯವನ್ನೂ ನೀಡಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ.
ಭಾನುವಾರದ ಭೇಟಿ ವೇಳೆ ಯಡಿಯೂರಪ್ಪ ಮತ್ತು ಅವರ ಇಬ್ಬರು ಪುತ್ರರಾದ ವಿಜಯೇಂದ್ರ ಮತ್ತು ರಾಘವೇಂದ್ರ ಅವರನ್ನು ಕೂಡಿಸಿಕೊಂಡು ಸಿಬಿಐ ತನಿಖೆಯನ್ನು ಹೇಗೆ ಎದುರಿಸಬೇಕು ಮತ್ತು ಪ್ರಕರಣದಿಂದ ಹೇಗೆ ಹೊರಬರಬೇಕು ಎಂಬುದರ ಬಗ್ಗೆ ಹಲವಾರು ಕಾನೂನು Tips ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ ಹೈಕೋರ್ಟ್ ಈಗಾಗಲೆ ಪ್ರಕರಣದಲ್ಲಿ FIR ದಾಖಲಿಸಿರುವುದಕ್ಕೆ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಈಗ ಎಚ್ಚರಿಕೆಯ ಕ್ರಮ ಅನುಸರಿಸ ಬೇಕಾಗಿದೆ. ಈ ವಿದ್ಯಮಾನವು ನಿಮ್ಮ ಪರವಾಗಿ ಕೆಲಸ ಮಾಡಲಿದೆ. ಅಷ್ಟರ ಮಟ್ಟಿಗೆ ನೀವು safe ಎಂದಿದ್ದಾರೆ ಆಚಾರ್ಯರು.
ಸಿಬಿಐ ನಾಳೆ, ನಾಳಿದ್ದೋ ತಮ್ಮನ್ನು ಬಂಧಿಸಿದರೆ ಗತಿಯೇನು ಎಂದು ಬಿಎಸ್ವೈ ಮಕ್ಕಳು ಆತಂಕ ವ್ಯಕ್ತಪಡಿಸಿದ್ದಾಗ ಅಂತಾದ್ದೇನೂ ಆಗುವುದಿಲ್ಲ. ಭಯ ಪಡಬೇಡಿ ಎಂದು ಅಚಾರ್ಯರು ತಮ್ಮ ಶ್ರೀರಕ್ಷೆ ನೀಡಿದ್ದಾರೆ.
ಈ ಮದ್ಯೆ, ಬೆಂಗಳೂರು ಸಿಬಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACB) DIG ಆರ್. ಹಿತೇಂದ್ರ ಕುಮಾರ್ ಅವರು ಸೋಮವಾರ ನವದೆಹಲಿಗೆ ಪ್ರಯಾಣ ಬೆಳೆಸಿದ್ದು, ಮಂಗಳವಾರ ಸುಪ್ರೀಂಕೋರ್ಟಿನ order copy ಹಿಡಿದುಕೊಂಡು ಬರಲಿದ್ದಾರೆ. ಆ ನಂತರ ಬೆಂಗಳೂರಿನಲ್ಲಿರುವ ಸಿಬಿಐ ವಿಶೇಷ ಕೋರ್ಟಿನಲ್ಲಿ ಬುಧವಾರ FIR ದಾಖಲು, ಮುಂದಿನ ಪ್ರಕ್ರಿಯೆ.
ಆದರೆ DIG ಆರ್. ಹಿತೇಂದ್ರ ಕುಮಾರ್ ಅವರೇ ಪ್ರಕರಣದ ಮುಖ್ಯ ತನಿಖಾಧಿಕಾರಿ ಆಗುತ್ತಾರಾ ಎಂಬುದು ಇನ್ನೂ ಖಚಿತಪಟ್ಟಿಲ್ಲ. 1996ನೇ ಸಾಲಿನ ಕರ್ನಾಟಕ ಕೇಡರಿನ IPS ಅಧಿಕಾರಿ ಹಿತೇಂದ್ರ ಅವರು ಪ್ರಸ್ತುತ deputation ಮೇಲೆ ಸಿಬಿಐನಲ್ಲಿದ್ದು, 2013ರ ಅಕ್ಟೋಬರ್ 31ರವರೆಗೂ ಸಿಬಿಐನಲ್ಲಿರುತ್ತಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications