ಬೇಲು ಸಿಕ್ತು, ಟೆಲಿಕಾಂ ರಾಜಾ ಇನ್ನು ಮಹಾರಾಜ!

ಸಿಬಿಐ ವಿಶೇಷ ಜಡ್ಜ್ ಒ.ಪಿ. ಸೈನಿ ಅವರು ಮಂಗಳವಾರ ಡಿಎಂಕೆ ಸಂಸದ ರಾಜಾಗೆ ಜೈಲಿನಿಂದ ಮುಕ್ತಿ ನೀಡಿದ್ದಾರೆ. ಷರತ್ತುಗಳು: ರಾಜಾ, ದೆಹಲಿ ಬಿಟ್ಟು ತೆರಳಬಾರದು. ಚೆನ್ನೈಗೂ ಹೋಗುವಂತಿಲ್ಲ. ಕೋರ್ಟಿಗೆ 30 ಲಕ್ಷ ರುಪಾಯಿ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಸಿಬಿಐ, ಕಳೆದ ವರ್ಷ ಫೆ. 2ರಂದು ರಾಜಾರನ್ನು ಬಂಧಿಸಿ, ತಿಹಾರ್ ಜೈಲಿಗೆ ಕಳಿಸಿತ್ತು.
ಸ್ವಾತಂತ್ರ್ಯೋತ್ತರ ಭಾರತದಲ್ಲಿ ಘಟಿಸಿರುವ ಅತಿ ದೊಡ್ಡ ಹಗರಣದ ಸರದಾರ ಈ ರಾಜಾ ಎಂದು ಬಿಂಬಿತರಾಗಿದ್ದಾರೆ. ಆದರೆ ಡಿಎಂಕೆಯ ಬಹುಮುಖ ಪ್ರತಿಭೆ ಕನ್ನಿಮೋಳಿ ಸಹ ಪ್ರಕರಣದ ಪ್ರಮುಖ ಪಾತ್ರಧಾರಿ ಎನ್ನಲಾಗಿದೆಯಾದರೂ ಆರೇ ತಿಂಗಳಿಗೆ ತಿಹಾರ ಜೈಲುವಾಸ ಮುಗಿಸಿಕೊಂಡು ಜಾಮೀನಿನ ಮೇಲೆ ಈಗಾಗಲೇ ಮನೆ ಸೇರಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂಬುದು ಗಮನಾರ್ಹ.












Click it and Unblock the Notifications