ಸಿಬಿಐನಿಂದ ಯಾವುದೇ ಕ್ಷಣ ಯಡಿಯೂರಪ್ಪ ಬಂಧನ?

ಶೋಭಾ ಲಾಬಿ: ಎರಡು ದಿನಗಳಿಂದ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಯಡಿಯೂರಪ್ಪ ಅವರ ಆಪ್ತರಾದ ಶೋಭಾ ಕರಂದ್ಲಾಜೆ ಅವರು ಯಡಿಯೂರಪ್ಪ ಬಂಧನವನ್ನು ತಪ್ಪಿಸಲು ದೊಡ್ಡ ಮಟ್ಟದಲ್ಲಿ ಭಾರಿ ಲಾಬಿ ನಡೆಸುತ್ತಿದ್ದಾರೆ ಎಂದು tv ವರದಿ ಮಾಡುತ್ತಿದೆ.
ಏಕಾಏಕಿ ಬಂಧನಕ್ಕೆ ಕಾರಣವೇನು?: ಯಡಿಯೂರಪ್ಪ ಮತ್ತು ಪ್ರಕರಣದ ಇತರೆ ಆರೋಪಿಗಳಿಗೆ ಸೇರಿದ ಮನೆಗಳು ಮತ್ತು ಕಚೇರಿಗಳ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಸಿಬಿಐ ತಂಡ ದಾಳಿ ನಡೆಸಿತ್ತು. ಏಕಕಾಲದಲ್ಲಿ ಶಿವಮೊಗ್ಗ, ಶಿಕಾರಿಪುರ ಮತ್ತು ಬಳ್ಳಾರಿಗಳಲ್ಲಿ ಸಿಬಿಐ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೂ ಸಿಬಿಐ ತಂಡಕ್ಕೆ ನೆರವು ನೀಡುತ್ತಿದ್ದಾರೆ.
ಆದರೆ ಇನ್ನೂ ಹಲವಾರು ದಾಖಲೆ, ಕಡತಗಳು ನಾಪತ್ತೆಯಾಗಿರುವುದು ಸಿಬಿಐ ಗಮನಕ್ಕೆ ಬಂದಿದೆ. ಹೀಗಾಗಿ ಹೆಚ್ಚಿನ ಮಾಹಿತಿಗಾಗಿ ಪ್ರಕರಣದ ಆರೋಪಿ ನಂ. 1 ಯಡಿಯೂರಪ್ಪ ಅವರನ್ನು ಸಿಬಿಐ ತನ್ನ ವಶಕ್ಕೆ ತೆಗೆದುಕೊಳ್ಳುವ ಸಾಧ್ಯೆತಗಳು ಹೆಚ್ಚಾಗಿವೆ.
ಇದೇ ವೇಳೆ, ಯಡಿಯೂರಪ್ಪ ಅವರ ಬಂಧನಕ್ಕೆ ವಾರಂಟ್ ಹೊರಡಿಸಲಾಗಿದೆ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ, ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಮತ್ತು ಡಾಲರ್ಸ್ ಕಾಲೊನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಗಳ ಸುತ್ತ ಸ್ಥಳೀಯ ಪೊಲೀಸರು ಭಾರಿ ಭದ್ರೆತೆ ಹಾಕಿದ್ದಾರೆ.












Click it and Unblock the Notifications