ದೈವನಿಂದನೆ : ಫೇಸ್ ಬುಕ್ ಬ್ಲಾಕ್ ಮಾಡಿದ ಪಾಕ್

ಪಾಕಿಸ್ತಾನದ ಆಂತರಿಕ ವ್ಯವಹಾರಗಳ ಸಚಿವ ರೆಹಮಾನ್ ಮಲ್ಲಿಕ್ ಅವರು ಈ ಸುದ್ದಿಯನ್ನು ಅಲ್ಲೆಗಳೆದಿದ್ದಾರಾದರೂ, ರಾವಳಪಿಂಡಿ, ಇಸ್ಲಾಮಾಬಾದ್ ಮುಂತಾದ ನಗರಗಳಲ್ಲಿ ಟ್ವಿಟ್ಟರ್ ವೆಬ್ಸೈಟನ್ನು ನೋಡಲು ಸಾಧ್ಯವಾಗುತ್ತಿಲ್ಲ ಎಂದು ನೆಟ್ಟಿಗರು ದೂರಿದ್ದಾರೆ. ಮೊಬೈಲಲ್ಲಿ ಕೂಡ ಟ್ವಿಟ್ಟರ್ ಮತ್ತು ಫೇಸ್ ಬುಕ್ ಅಂತರ್ಜಾಲ ತಾಣಗಳನ್ನು ಪ್ರವೇಶಿಸಲು ಆಗುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ.
"ಆತ್ಮೀಯ ನೆಟ್ಟಿಗರೆ, ಪಾಕಿಸ್ತಾನದಲ್ಲಿ ಟ್ವಿಟ್ಟರ್ ಮತ್ತು ಫೇಸ್ ಬುಕ್ ಸಾಮಾಜಿಕ ತಾಣಗಳನ್ನು ನಿಷೇಧಿಸಲಾಗುವುದಿಲ್ಲ ಎಂಬ ಭರವಸೆ ನೀಡುತ್ತೇನೆ" ಎಂದು ರೆಹಮಾನ್ ಮಲ್ಲಿಕ್ ಟ್ವೀಟ್ ಸಂದೇಶ ರವಾನಿಸಿದ ಗಂಟೆಗಳಲ್ಲಿ ಇವೆರಡು ತಾಣಗಳು ಅಂತರ್ಜಾಲ ತಾಣ ಬಳಕೆದಾರರಿಗೆ ಲಭ್ಯವಾಗುತ್ತಿಲ್ಲ.
ಟ್ವಿಟ್ಟರ್ ಮತ್ತು ಫೇಸ್ ಬುಕ್ ತಾಣಗಳಲ್ಲಿ ದೈವನಿಂದನೆಯ ಸಂದೇಶಗಳು ಪ್ರಕಟವಾಗುತ್ತಿವೆ ಎಂಬ ಕಾರಣ ನೀಡಿ ಪಾಕಿಸ್ತಾನದ ಮಾಹಿತಿ ತಂತ್ರಜ್ಞಾನ ಸಚಿವ ರಾಜಾ ಪರ್ವೇಜ್ ಅವರು ಇವೆರಡು ವೆಬ್ಸೈಟ್ಗಳನ್ನು ನಿಷೇಧಿಸುವ ಸಾಧ್ಯತೆ ಇದೆ ಎಂದು ಕೆಲ ಟಿವಿ ಚಾನಲ್ಗಳು ಪ್ರಸಾರ ಮಾಡಿದ್ದವು. ಈ ಹಿಂದೆ ಕೂಡ ಪ್ರವಾದಿ ಮೊಹಮ್ಮದ್ ವಿರುದ್ಧ ಸಂದೇಶ ಪ್ರಕಟಿಸಿದ್ದಕ್ಕಾಗಿ ಲಾಹೋರ್ ಹೈಕೋರ್ಟ್ ಟ್ವಿಟ್ಟರ್ ಮತ್ತು ಫೇಸ್ ಬುಕ್ ಗಳನ್ನು ನಿಷೇಧಿಸಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications