Get Updates
Get notified of breaking news, exclusive insights, and must-see stories!

ಬೆಳಗಾವಿ: ನೂರಾರು ಕರವೇ ಕಾರ್ಯಕರ್ತರ ಸೆರೆ

Karnataka Rakshana Vedike Activists held
ಬೆಳಗಾವಿ, ಮೇ.20: ಮರಾಠಿಗರ ಮಹಾಮೇಳಾವ್ ಗೆ ವಿರೋಧ ವ್ಯಕ್ತಪಡಿಸಿದ ಬೆಳಗಾವಿಗೆ ಆಗಮಿಸುತ್ತಿದ್ದ 100ಕ್ಕೂ ಅಧಿಕ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

ಇದಲ್ಲದೆ ಶನಿವಾರ(ಮೇ.19) ದಂದು ನಿಪ್ಪಾಣಿಯ ಮಹಾಂತೇಶ್ ನಗರ ಬಳಿ ಬೆಂಕಿ ಹಚ್ಚಲು ಯತ್ನಿಸಿದ್ದ ಚಿಕ್ಕೋಡಿ ಕರವೇ ಅಧ್ಯಕ್ಷ ಸಂಜು ಬಡಿಗೇರ್ ನೇತೃತ್ವದ ಕಾರ್ಯಕರ್ತರನ್ನು ಕೂಡಾ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಬೆಳಗಾವಿ ತಾಲೂಕು ಕರವೇ ಅಧ್ಯಕ್ಷ ರಮೇಶ್ ತಲವಾರ್ ಕೇರಿ ಸೇರಿದಂತೆ 8 ಜನರನ್ನು ಮಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿ, ಯಲ್ಲೂರು, ಕಿತ್ತೂರು, ಚಿಕ್ಕೋಡಿ ಸೇರಿದಂತೆ ಎಲ್ಲೆಡೆ ಕರವೇ ಕಾರ್ಯಕರ್ತರಿಗೆ ದಿಗ್ಬಂಧನ ಹಾಕಲಾಗಿದೆ.

ಯಾವೊಬ್ಬ ಕನ್ನಡ ಪರ ಕಾರ್ಯಕರ್ತರು ಸೊಲ್ಲೆತ್ತಲು ಬಿಡುತ್ತಿಲ್ಲ. ಸಂವಿಧಾನ ಬದ್ಧ ಹಕ್ಕುಗಳನ್ನು ಕಿತ್ತು ಹಾಕಿಕೊಳ್ಳಲಾಗಿದೆ ಎಂದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾಮೇಳಾವ್ ಗೆ ಷರತ್ತುಬದ್ಧ ಒಪ್ಪಿಗೆ ನೀಡಿದ್ದೇವೆ. ಕಾನೂನು ವ್ಯವಸ್ಥೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶ ಎಂದು ಜಿಲ್ಲಾಡಳಿತ ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+